ಶಿರಾ: ತಾಲ್ಲೂಕಿನ ಚಿನ್ನಪ್ಪನಹಳ್ಳಿ ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವಿಸಿ 60 ಮಂದಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡ 60 ಜನರಲ್ಲಿ 15 ಮಂದಿಯನ್ನು ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗುತ್ತಿದೆ. ಇನ್ನುಳಿದವರು ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾರಿಗೂ ಪ್ರಾಣಾಪಾಯವಿಲ್ಲ. ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಚಿನ್ನಪ್ಪನಹಳ್ಳಿಯ ಗ್ರಾಮಸ್ಥಮರಿಯಣ್ಣ ಎಂಬುವರುಶನಿವಾರ ಆಂಜನೇಯಸ್ವಾಮಿಗೆ ಪೂಜೆ ಮಾಡಿಸಿ ಗ್ರಾಮಸ್ಥರಿಗೆ ಊಟ ಹಾಕಿಸಿದ್ದರು.
ಊಟ ಮಾಡಿದ್ದವರಲ್ಲಿ 60 ಮಂದಿಗೆ ಭಾನುವಾರ ಮಧ್ಯಾಹ್ನದ ಬಳಿಕ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ ಎಂದು ತಿಳಿದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಭೇಟಿ ನೀಡಿ ಚಿಕಿತ್ಸೆ ನೀಡುತ್ತಿರುವ ವೈದ್ಯರಿಂದ ಮಾಹಿತಿ ಪಡೆದರು. ಹೆಚ್ಚು ಅಸ್ವಸ್ಥರಾದವರನ್ನು ತುಮಕೂರು ಆಸ್ಪತ್ರೆಗೆ ಸೇರಿಸಲು ಸೂಚಿಸಿದರು.