<p><strong>ಪಾವಗಡ: </strong>ತಾಲ್ಲೂಕಿನ ಹೆಚ್ಚಿನ ಕೆರೆಗಳನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಸೇರಿಸಬೇಕು. ತಾಲ್ಲೂಕಿಗೆ 2 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಹಸಿರು ಸೇನೆ ಪದಾಧಿಕಾರಿಗಳು ಭಾನುವಾರ ಶಾಸಕ ವೆಂಕಟರಮಣಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ರೈತರು ಮಳೆ, ಬೆಳೆ ಇಲ್ಲದೆ ಜೀವನಕ್ಕಾಗಿ ಮಕ್ಕಳೊಂದಿಗೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಫ್ಲೋರೈಡ್ ಸಮಸ್ಯೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿದೆ. ಹೀಗಾಗಿ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ 34 ಕೆರೆಗಳನ್ನು ಯೋಜನೆಗೆ ಸೇರಿಸಲಾಗಿದೆ. ಗುಂಡ್ಲಹಳ್ಳಿ, ಚಿಕ್ಕಕೆರೆ, ಮುಗದಾಳಬೆಟ್ಟ, ತಿಪ್ಪಯ್ಯನಕೆರೆ ಸೇರಿದಂತೆ ಇನ್ನೂ ಹೆಚ್ಚಿನ ಕೆರೆಗಳನ್ನು ಸೇರಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಅರ್ಧ ಟಿಎಂಸಿ ಅಡಿ ನೀರು ತಾಲ್ಲೂಕಿಗೆ ಸಾಕಾಗುವುದಿಲ್ಲ. ಕನಿಷ್ಠ 2 ಟಿಎಂಸಿ ನೀರು ಹಂಚಿಕೆ ಮಾಡಲು ಸಚಿವರು, ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು.</p>.<p>ಕೋವಿಡ್ನಿಂದ ಸಂಕಷ್ಟದಲ್ಲಿರುವ ರೈತರ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಯಡಿ ಹೆಚ್ಚಿನ ಕೆರೆಗಳಿಗೆ ನೀರು ಹರಿಸಬೇಕು. ಕನಿಷ್ಠ 2 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಪದಾಧಿಕಾರಿಗಳಾದ ನಾರಾಯಣಪ್ಪ, ನಡಪನ್ನ, ರಾಮಾಂಜಿ, ನರಸಣ್ಣ, ಹನುಮಂತರಾಯಪ್ಪ, ಪಾಂಡು ರಂಗಪ್ಪ, ಶನಿವಾರಪ್ಪ, ಶಿವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ತಾಲ್ಲೂಕಿನ ಹೆಚ್ಚಿನ ಕೆರೆಗಳನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಸೇರಿಸಬೇಕು. ತಾಲ್ಲೂಕಿಗೆ 2 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಹಸಿರು ಸೇನೆ ಪದಾಧಿಕಾರಿಗಳು ಭಾನುವಾರ ಶಾಸಕ ವೆಂಕಟರಮಣಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ರೈತರು ಮಳೆ, ಬೆಳೆ ಇಲ್ಲದೆ ಜೀವನಕ್ಕಾಗಿ ಮಕ್ಕಳೊಂದಿಗೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಫ್ಲೋರೈಡ್ ಸಮಸ್ಯೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿದೆ. ಹೀಗಾಗಿ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ 34 ಕೆರೆಗಳನ್ನು ಯೋಜನೆಗೆ ಸೇರಿಸಲಾಗಿದೆ. ಗುಂಡ್ಲಹಳ್ಳಿ, ಚಿಕ್ಕಕೆರೆ, ಮುಗದಾಳಬೆಟ್ಟ, ತಿಪ್ಪಯ್ಯನಕೆರೆ ಸೇರಿದಂತೆ ಇನ್ನೂ ಹೆಚ್ಚಿನ ಕೆರೆಗಳನ್ನು ಸೇರಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಅರ್ಧ ಟಿಎಂಸಿ ಅಡಿ ನೀರು ತಾಲ್ಲೂಕಿಗೆ ಸಾಕಾಗುವುದಿಲ್ಲ. ಕನಿಷ್ಠ 2 ಟಿಎಂಸಿ ನೀರು ಹಂಚಿಕೆ ಮಾಡಲು ಸಚಿವರು, ಮುಖ್ಯಮಂತ್ರಿಗಳಿಗೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು.</p>.<p>ಕೋವಿಡ್ನಿಂದ ಸಂಕಷ್ಟದಲ್ಲಿರುವ ರೈತರ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಯಡಿ ಹೆಚ್ಚಿನ ಕೆರೆಗಳಿಗೆ ನೀರು ಹರಿಸಬೇಕು. ಕನಿಷ್ಠ 2 ಟಿಎಂಸಿ ಅಡಿ ನೀರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಪದಾಧಿಕಾರಿಗಳಾದ ನಾರಾಯಣಪ್ಪ, ನಡಪನ್ನ, ರಾಮಾಂಜಿ, ನರಸಣ್ಣ, ಹನುಮಂತರಾಯಪ್ಪ, ಪಾಂಡು ರಂಗಪ್ಪ, ಶನಿವಾರಪ್ಪ, ಶಿವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>