<p>ತುರುವೇಕೆರೆ: ತಾಲ್ಲೂಕಿನ ಯರದೇಹಳ್ಳಿಯಲ್ಲಿ ಒಂದೇ ಕುಟುಂಬದವರು 17 ಎಕರೆ ಅರಣ್ಯ ಭೂಮಿಯನ್ನು ಅತಿಕ್ರಮವಾಗಿ ಪ್ರವೇಶಿಸಿ, ಭೂ ಕಬಳಿಕೆ ಮಾಡಿದ್ದಾರೆ ಎಂದು ಯರದಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಿಪಟೂರು ಉಪ<br />ವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆಮತ್ತು ತಹಶೀಲ್ದಾರ್ಆರ್.ನಯೀಂಉನ್ನೀಸಾ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಅರಣ್ಯ ಭೂಮಿಯಲ್ಲಿ ದನ, ಕರುಗಳು ಮೇಯಲು, ಕಾಡುಪ್ರಾಣಿಗಳು ವಾಸವಿರುವ ಈ ಪ್ರದೇಶವನ್ನು ಹಾಗೂ ಅಕ್ರಮವಾಗಿ ಮಂಜೂರಾಗಿರುವ ಜಾಗವನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು.</p>.<p>ಎಸಿ ಮತ್ತು ತಹಶೀಲ್ದಾರ್ ಮಾತನಾಡಿ, ಈ ಜಾಗವು ಸಾಮಾಜಿಕ ಅರಣ್ಯ ಪ್ರದೇಶವಾಗಿದೆ. ಸಂಬಂಧಪಟ್ಟ ದಾಖಲೆ, ಸ್ಥಳ ಪರಿಶೀಲಿಸಲಾಗಿದೆ. ಸದರಿ ಜಾಗದಲ್ಲಿ ನೀಲಗಿರಿ ಮರಗಳು ಇದ್ದು, ಇದು ಅರಣ್ಯ ಪ್ರದೇಶವಾಗಿರುತ್ತದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣವಿದ್ದು ಜುಲೈ 14ರಂದು ವಿಚಾರಣೆ ಇದ್ದು, ಆನಂತರ ಕ್ರಮಕೈಗೊಳ್ಳಲಾಗುವುದು ಎಂದರು. ಈ ಸ್ಥಳವನ್ನು ಅತಿಕ್ರಮವಾಗಿ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಅರಣ್ಯ ಇಲಾಖೆಯ ಅಧಿಕಾರಿ ಲಿಂಗರಾಜ ಮಾತನಾಡಿ, ಈ ಸ್ಥಳವು ಸಾಮಾಜಿಕ ಅರಣ್ಯ ಪ್ರದೇಶವಾಗಿದ್ದು, ಇದನ್ನು ಒತ್ತುವರಿ ಮಾಡಲಾಗುತ್ತಿದೆ. ಇದರ ವಿರುದ್ಧ ಈಗಾಗಲೇ ಕ್ರಮಕೈಗೊಂಡು ಅತಿಕ್ರಮ ಪ್ರವೇಶವನ್ನು ತೆರವುಗೊಳಿಸುವಂತೆ ಕಂದಾಯ ಇಲಾ<br />ಖೆಗೆ ಮನವಿ ಮಾಡಿದ್ದೇವೆ ಎಂದರು.</p>.<p>ಡಿವೈಎಸ್ಪಿ ರಮೇಶ್, ಸಿಪಿಐ ನವೀನ್, ರಮೇಶ್, ಶಂಕರಲಿಂಗೇಗೌಡ, ನಂದೀಶ್, ಶಿವಕುಮಾರ, ನರಸಿಂಹಯ್ಯ, ಗಂಗಾಧರ, ಸವಿತಾ, ನವೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ತಾಲ್ಲೂಕಿನ ಯರದೇಹಳ್ಳಿಯಲ್ಲಿ ಒಂದೇ ಕುಟುಂಬದವರು 17 ಎಕರೆ ಅರಣ್ಯ ಭೂಮಿಯನ್ನು ಅತಿಕ್ರಮವಾಗಿ ಪ್ರವೇಶಿಸಿ, ಭೂ ಕಬಳಿಕೆ ಮಾಡಿದ್ದಾರೆ ಎಂದು ಯರದಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಿಪಟೂರು ಉಪ<br />ವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆಮತ್ತು ತಹಶೀಲ್ದಾರ್ಆರ್.ನಯೀಂಉನ್ನೀಸಾ ಭೇಟಿ ನೀಡಿ, ಪರಿಶೀಲಿಸಿದರು.</p>.<p>ಅರಣ್ಯ ಭೂಮಿಯಲ್ಲಿ ದನ, ಕರುಗಳು ಮೇಯಲು, ಕಾಡುಪ್ರಾಣಿಗಳು ವಾಸವಿರುವ ಈ ಪ್ರದೇಶವನ್ನು ಹಾಗೂ ಅಕ್ರಮವಾಗಿ ಮಂಜೂರಾಗಿರುವ ಜಾಗವನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದರು.</p>.<p>ಎಸಿ ಮತ್ತು ತಹಶೀಲ್ದಾರ್ ಮಾತನಾಡಿ, ಈ ಜಾಗವು ಸಾಮಾಜಿಕ ಅರಣ್ಯ ಪ್ರದೇಶವಾಗಿದೆ. ಸಂಬಂಧಪಟ್ಟ ದಾಖಲೆ, ಸ್ಥಳ ಪರಿಶೀಲಿಸಲಾಗಿದೆ. ಸದರಿ ಜಾಗದಲ್ಲಿ ನೀಲಗಿರಿ ಮರಗಳು ಇದ್ದು, ಇದು ಅರಣ್ಯ ಪ್ರದೇಶವಾಗಿರುತ್ತದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣವಿದ್ದು ಜುಲೈ 14ರಂದು ವಿಚಾರಣೆ ಇದ್ದು, ಆನಂತರ ಕ್ರಮಕೈಗೊಳ್ಳಲಾಗುವುದು ಎಂದರು. ಈ ಸ್ಥಳವನ್ನು ಅತಿಕ್ರಮವಾಗಿ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಅರಣ್ಯ ಇಲಾಖೆಯ ಅಧಿಕಾರಿ ಲಿಂಗರಾಜ ಮಾತನಾಡಿ, ಈ ಸ್ಥಳವು ಸಾಮಾಜಿಕ ಅರಣ್ಯ ಪ್ರದೇಶವಾಗಿದ್ದು, ಇದನ್ನು ಒತ್ತುವರಿ ಮಾಡಲಾಗುತ್ತಿದೆ. ಇದರ ವಿರುದ್ಧ ಈಗಾಗಲೇ ಕ್ರಮಕೈಗೊಂಡು ಅತಿಕ್ರಮ ಪ್ರವೇಶವನ್ನು ತೆರವುಗೊಳಿಸುವಂತೆ ಕಂದಾಯ ಇಲಾ<br />ಖೆಗೆ ಮನವಿ ಮಾಡಿದ್ದೇವೆ ಎಂದರು.</p>.<p>ಡಿವೈಎಸ್ಪಿ ರಮೇಶ್, ಸಿಪಿಐ ನವೀನ್, ರಮೇಶ್, ಶಂಕರಲಿಂಗೇಗೌಡ, ನಂದೀಶ್, ಶಿವಕುಮಾರ, ನರಸಿಂಹಯ್ಯ, ಗಂಗಾಧರ, ಸವಿತಾ, ನವೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>