ಕುಣಿಗಲ್: ತಾಲ್ಲೂಕಿನ ಕೊತ್ತಗೆರೆ ಹೋಬಳಿಯ ಕೆಂಪಸಾಗರದಲ್ಲಿ ಶನಿವಾರ ಹೊಲ ಹೂಳುವಾಗ ಟ್ರ್ಯಾಕ್ಟರ್ ಮುಗಿಚಿ ಬಿದ್ದು ಗಸ್ತು ಅರಣ್ಯ ಪಾಲಕ ಮೋಹನ್ ಕುಮಾರ್ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೋಹನ್ ಕುಮಾರ್ ಅವರು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಇಲಾಖೆಯಿಂದ 2020ರಲ್ಲಿ ಮುಖ್ಯಮಂತ್ರಿ ಪದಕ ಪಡೆದಿದ್ದರು.