‘ಪ್ರಸ್ತುತ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿತರಾಗಿರುವ ಚಂದೇನಹಳ್ಳಿ ಮುನಿಯಪ್ಪ ಮತ್ತು ಎಂ. ನಾರಾಯಣಸ್ವಾಮಿ ಜನತಾ ಪರಿವಾರದಿಂದ ಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಾದಿಗ ಸಮುದಾಯದಲ್ಲಿ ಮೂಲ ಕಾಂಗ್ರೆಸ್ ಪಕ್ಷದವರ ಪಟ್ಟಿಯಲ್ಲಿ ನಾನೇ ಮುಂಚೂಣಿಯಲ್ಲಿದ್ದೇನೆ. 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿಯುತ್ತಿದ್ದೇನೆ. ಪುರಸಭೆ ಸದಸ್ಯನಾಗಿ, ಪ್ರಸ್ತುತ ಪುರಸಭೆ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ’ ಎಂದರು.