<p><strong>ಹುಳಿಯಾರು</strong>: ಪಟ್ಟಣದಲ್ಲಿ ವಿವಿಧ ಮಹಿಳಾ ಸಂಘಟನೆಗಳಿಂದ ದೇವನಹಳ್ಳಿ, ಚನ್ನರಾಯಪಟ್ಟಣ ತಾಲ್ಲೂಕಿನ 13 ಹಳ್ಳಿಗಳ ರೈತರ ಕೃಷಿ ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಡೆಸುತ್ತಿರುವ ಹೋರಾಟ ಬೆಂಬಲಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಸುವರ್ಣ ವಿದ್ಯಾ ಚೇತನ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಅನ್ನ ಬೆಳೆವ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬಾರದು. ಭೂಮಿ ವಶಪಡಿಸಿಕೊಂಡರೆ ರೈತರು ಬೀದಿಗೆ ಬರುತ್ತಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ತಿನ್ನುವ ಅನ್ನಕ್ಕೆ ಬರ ಬರಬಹುದು ಎಂದರು.</p>.<p>ಸೃಜನ ಮಹಿಳಾ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷೆ ಎನ್.ಇಂದಿರಮ್ಮ ಮಾತನಾಡಿ, ಹೋರಾಟ ನಿರತರನ್ನು ಪಶುಗಳಂತೆ ಎಳೆದಾಡಿದ್ದು ಖಂಡನೀಯ. ಇದೊಂದು ಅಮಾನವೀಯ ಘಟನೆ ಎಂದರು.</p>.<p>ಮಹಿಳಾ ಸಂಘಟನೆ ಪದಾಧಿಕಾರಿಗಳು ಉಪ ತಹಶೀಲ್ದಾರ್ ವಿನುತಾ ಅವರ ಮೂಲಕ ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.</p>.<p>ನಿರಾಶ್ರಿತ ಮಹಿಳಾ ಸಂಘಟನೆ ಅಧ್ಯಕ್ಷೆ ಜಯಲಕ್ಷ್ಮಮ್ಮ, ತಾಲ್ಲೂಕು ಸಿಐಟಿಯು ಘಟಕದ ಅಧ್ಯಕ್ಷೆ ಪೂರ್ಣಮ್ಮ ಮಾತನಾಡಿದರು. ಸರಸ್ವತಿ, ಮಮತಾ, ಜರೀನಾ, ವಸಂತಲಕ್ಷ್ಮಿ, ದೇವರಾಜಮ್ಮ, ದುರ್ಗಮ್ಮ, ಅಲೆಮಾರಿ ಸಂಘಟನೆ ಲಕ್ಷ್ಮಿ, ಮಾಲಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು</strong>: ಪಟ್ಟಣದಲ್ಲಿ ವಿವಿಧ ಮಹಿಳಾ ಸಂಘಟನೆಗಳಿಂದ ದೇವನಹಳ್ಳಿ, ಚನ್ನರಾಯಪಟ್ಟಣ ತಾಲ್ಲೂಕಿನ 13 ಹಳ್ಳಿಗಳ ರೈತರ ಕೃಷಿ ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಡೆಸುತ್ತಿರುವ ಹೋರಾಟ ಬೆಂಬಲಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಸುವರ್ಣ ವಿದ್ಯಾ ಚೇತನ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಅನ್ನ ಬೆಳೆವ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬಾರದು. ಭೂಮಿ ವಶಪಡಿಸಿಕೊಂಡರೆ ರೈತರು ಬೀದಿಗೆ ಬರುತ್ತಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ತಿನ್ನುವ ಅನ್ನಕ್ಕೆ ಬರ ಬರಬಹುದು ಎಂದರು.</p>.<p>ಸೃಜನ ಮಹಿಳಾ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷೆ ಎನ್.ಇಂದಿರಮ್ಮ ಮಾತನಾಡಿ, ಹೋರಾಟ ನಿರತರನ್ನು ಪಶುಗಳಂತೆ ಎಳೆದಾಡಿದ್ದು ಖಂಡನೀಯ. ಇದೊಂದು ಅಮಾನವೀಯ ಘಟನೆ ಎಂದರು.</p>.<p>ಮಹಿಳಾ ಸಂಘಟನೆ ಪದಾಧಿಕಾರಿಗಳು ಉಪ ತಹಶೀಲ್ದಾರ್ ವಿನುತಾ ಅವರ ಮೂಲಕ ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.</p>.<p>ನಿರಾಶ್ರಿತ ಮಹಿಳಾ ಸಂಘಟನೆ ಅಧ್ಯಕ್ಷೆ ಜಯಲಕ್ಷ್ಮಮ್ಮ, ತಾಲ್ಲೂಕು ಸಿಐಟಿಯು ಘಟಕದ ಅಧ್ಯಕ್ಷೆ ಪೂರ್ಣಮ್ಮ ಮಾತನಾಡಿದರು. ಸರಸ್ವತಿ, ಮಮತಾ, ಜರೀನಾ, ವಸಂತಲಕ್ಷ್ಮಿ, ದೇವರಾಜಮ್ಮ, ದುರ್ಗಮ್ಮ, ಅಲೆಮಾರಿ ಸಂಘಟನೆ ಲಕ್ಷ್ಮಿ, ಮಾಲಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>