ಕುಣಿಗಲ್: ತಾಲ್ಲೂಕಿನ ಎಚ್.ಡಿ. ರಾಜೇಶ್ ಗೌಡ ಸೇವಾ ಪ್ರತಿಷ್ಠಾನದಿಂದ ಶುಕ್ರವಾರ ಹುತ್ರಿದುರ್ಗ ಹೋಬಳಿಯ ಸಂತೆಪೇಟೆಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಎಚ್.ಡಿ. ರಾಜೇಶ್ ಗೌಡ ತಿಳಿಸಿದ್ದಾರೆ.
ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು ಒಕ್ಕಲಿಗ ಸಂಘದ ದಂತ ವೈದ್ಯಕೀಯ ಮಹಾವಿದ್ಯಾಲಯ, ಮೈಸೂರಿನ ಬಿ.ಜಿ.ಎಸ್ ಅಪೋಲೊ ಆಸ್ಪತ್ರೆ, ಬೆಂಗಳೂರಿನ ಪೂರ್ಣ ಸುಧಾ ಕ್ಯಾನ್ಸರ್ ಫೌಂಡೇಷನ್ನಿಂದ ತಜ್ಞ ವೈದ್ಯರ ತಂಡ ಶಿಬಿರದಲ್ಲಿ ಪಾಲ್ಗೊಳ್ಳಲಿದೆ.
ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಬೆಟ್ಟಹಳ್ಳಿಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ಬಿಜೆಪಿ ಮುಖಂಡ ಬಿ. ಸುರೇಶ್ ಗೌಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.