<p>ಕುಣಿಗಲ್: ಕೊರೊನಾ ಎರಡನೆ ಅಲೆ ಮನುಕುಲಕ್ಕೆ ಮಾನವೀಯತೆಯ ಪಾಠ ಕಲಿಸಿದೆ. ಆರೋಗ್ಯವಂತ ಸಮಾಜಕ್ಕಾಗಿ ದುಶ್ಚಟಗಳಿಂದ ಮುಕ್ತರಾಗಿ, ಪೌಷ್ಟಿಕ ಆಹಾರ ಸೇವಿಸಲು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಎಚ್.ಡಿ.ರಾಜೇಶ್ ಗೌಡ ಸೇವಾ ಪ್ರತಿಷ್ಠಾನದಿಂದ ಶುಕ್ರವಾರ ಹುತ್ರಿದುರ್ಗ ಹೋಬಳಿಯ ಸಂತೆಪೇಟೆಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣಾರ್ಥಹಮ್ಮಿಕೊಳ್ಳಲಾದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಲ್ಲಿ ಮಾತನಾಡಿದರು.</p>.<p>ಬೆಟ್ಟಹಳ್ಳಿಮಠದ ಚಂದ್ರಶೇಖರ ಶಿವಾಚಾರ್ಯ ಮಾತನಾಡಿ, ಕೊರೊನಾ ಸಂಕಷ್ಟದ ದಿನಗಳಲ್ಲಿ ದೇವಾಲಯ ಮುಚ್ಚಿದ್ದರೂ ನಾಡಿನ ಆಸ್ಪತ್ರೆಗಳು ಬಾಗಿಲು ತೆಗೆದಿತ್ತು. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಬೆಲೆಕಟ್ಟಲಾಗದ ಕೆಲಸ ಮಾಡಿದ್ದಾರೆ ಎಂದರು.</p>.<p>ಪ್ರತಿಷ್ಠಾನ ರಾಜೇಶ್ ಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವುದಾಗಿ ತಿಳಿಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ನಂದೀಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಓಂಕಾರ್, ಮುಖಂಡರಾದ ಋತ್ವೀಕ್ ಸುರೇಶ್ ಗೌಡ, ಧೀರಜ್, ಪೂರ್ಣ ಸುಧಾ ಕ್ಯಾನ್ಸರ್ ಆಸ್ಪತ್ರೆಯ ಮುಖ್ಯಸ್ಥರಾದ ಸುಜ್ಯೋತಿ, ದುರ್ಗೇಶ್, ಕನ್ನಡ ಸತ್ಯ ರಂಗಣ್ಣ ಇದ್ದರು.</p>.<p>ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು ಒಕ್ಕಲಿಗ ಸಂಘದ ದಂತ ವೈದ್ಯಕೀಯ ಮಹಾವಿದ್ಯಾಲಯ, ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆ, ಬೆಂಗಳೂರಿನ ಪೂರ್ಣ ಸುಧಾ ಕ್ಯಾನ್ಸರ್ ಫೌಂಡೇಷನ್ನಿಂದ ತಜ್ಞ ವೈದ್ಯರ ತಂಡ ಶಿಬಿರದಲ್ಲಿ ಪಾಲ್ಗೊಂಡರು. 1,500 ಮಂದಿಯ ಆರೋಗ್ಯ ತಪಾಸಣೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ಕೊರೊನಾ ಎರಡನೆ ಅಲೆ ಮನುಕುಲಕ್ಕೆ ಮಾನವೀಯತೆಯ ಪಾಠ ಕಲಿಸಿದೆ. ಆರೋಗ್ಯವಂತ ಸಮಾಜಕ್ಕಾಗಿ ದುಶ್ಚಟಗಳಿಂದ ಮುಕ್ತರಾಗಿ, ಪೌಷ್ಟಿಕ ಆಹಾರ ಸೇವಿಸಲು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಎಚ್.ಡಿ.ರಾಜೇಶ್ ಗೌಡ ಸೇವಾ ಪ್ರತಿಷ್ಠಾನದಿಂದ ಶುಕ್ರವಾರ ಹುತ್ರಿದುರ್ಗ ಹೋಬಳಿಯ ಸಂತೆಪೇಟೆಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣಾರ್ಥಹಮ್ಮಿಕೊಳ್ಳಲಾದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಲ್ಲಿ ಮಾತನಾಡಿದರು.</p>.<p>ಬೆಟ್ಟಹಳ್ಳಿಮಠದ ಚಂದ್ರಶೇಖರ ಶಿವಾಚಾರ್ಯ ಮಾತನಾಡಿ, ಕೊರೊನಾ ಸಂಕಷ್ಟದ ದಿನಗಳಲ್ಲಿ ದೇವಾಲಯ ಮುಚ್ಚಿದ್ದರೂ ನಾಡಿನ ಆಸ್ಪತ್ರೆಗಳು ಬಾಗಿಲು ತೆಗೆದಿತ್ತು. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಬೆಲೆಕಟ್ಟಲಾಗದ ಕೆಲಸ ಮಾಡಿದ್ದಾರೆ ಎಂದರು.</p>.<p>ಪ್ರತಿಷ್ಠಾನ ರಾಜೇಶ್ ಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿರುವುದಾಗಿ ತಿಳಿಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ನಂದೀಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಓಂಕಾರ್, ಮುಖಂಡರಾದ ಋತ್ವೀಕ್ ಸುರೇಶ್ ಗೌಡ, ಧೀರಜ್, ಪೂರ್ಣ ಸುಧಾ ಕ್ಯಾನ್ಸರ್ ಆಸ್ಪತ್ರೆಯ ಮುಖ್ಯಸ್ಥರಾದ ಸುಜ್ಯೋತಿ, ದುರ್ಗೇಶ್, ಕನ್ನಡ ಸತ್ಯ ರಂಗಣ್ಣ ಇದ್ದರು.</p>.<p>ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರು ಒಕ್ಕಲಿಗ ಸಂಘದ ದಂತ ವೈದ್ಯಕೀಯ ಮಹಾವಿದ್ಯಾಲಯ, ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆ, ಬೆಂಗಳೂರಿನ ಪೂರ್ಣ ಸುಧಾ ಕ್ಯಾನ್ಸರ್ ಫೌಂಡೇಷನ್ನಿಂದ ತಜ್ಞ ವೈದ್ಯರ ತಂಡ ಶಿಬಿರದಲ್ಲಿ ಪಾಲ್ಗೊಂಡರು. 1,500 ಮಂದಿಯ ಆರೋಗ್ಯ ತಪಾಸಣೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>