<p><strong>ತುಮಕೂರು:</strong> ಯುವ ಸಮೂಹ ಮಹಾತ್ಮ ಗಾಂಧಿ ಅವರ ಸಂದೇಶ ಓದಿ, ಅರ್ಥ ಮಾಡಿಕೊಂಡು, ಅದರಂತೆ ನಡೆದುಕೊಳ್ಳಬೇಕು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಸಲಹೆ ಮಾಡಿದರು.</p>.<p>ನಗರದಲ್ಲಿ ಭಾನುವಾರ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಹಾಲಪ್ಪ ಪ್ರತಿಷ್ಠಾನದಿಂದ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ, ‘ಸ್ವಾತಂತ್ರ ಯೋಧರು, ಅವರ ವಾರಸುದಾರರಿಗೆ ಸರ್ಕಾರದ ಸೌಲಭ್ಯ ಸಿಗಬೇಕು. ವೀರ ಸೌಧಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಮಾಶಾಸನ ಹೆಚ್ಚಿಸಬೇಕು’ ಎಂದರು.</p>.ಬೀದರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಿರಂಗಾ ಯಾತ್ರೆ ಸಂಭ್ರಮ.<p>ನಗರದ ಸ್ವತಂತ್ರ ಚೌಕದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ಲಿಂದ ಮಂಡಿಪೇಟೆ, ಜೆ.ಸಿ.ರಸ್ತೆಯ ಮೂಲಕ ವೀರ ಸೌಧದ ವರೆಗೆ ಮೆರವಣಿಗೆ ನಡೆಯಿತು. ಎಸ್ಬಿಐ ಅಧಿಕಾರಿ ಪ್ರೊ.ಕೆ.ಪುಟ್ಟರಂಗಪ್ಪ ಅವರ ‘ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು’ ಕಿರು ಹೊತ್ತಿಗೆ ಬಿಡುಗಡೆಗೊಳಿಸಲಾಯಿತು.</p>.<p>ಮುಖಂಡರಾದ ರಾಜೇಂದ್ರ ಕಲಘಟಗಿ, ಟಿ.ಆರ್.ಕಲ್ಪನಾ, ಆಶಾ ಪ್ರಸನ್ನಕುಮಾರ್, ಬಿ.ಎಸ್.ಮಂಜುನಾಥ್, ಬಸವರಾಜ ಹಟ್ಟಿಗೌಡರ್, ಶಿವರಾಜು, ಜಗದೀಶ್, ಶಿವಯೋಗಯ್ಯ, ಪುರುಷೋತ್ತಮ್, ಟಿ.ಆರ್.ಸುದರ್ಶನ್, ಪ್ರಸನ್ನಕುಮಾರ್, ಚನ್ನಮಲ್ಲೇಗೌಡ, ಚನ್ನಕೇಶವಯ್ಯ, ಎಸ್.ಸತ್ಯ, ಕೆ.ಎಚ್.ಚಂದ್ರಶೇಖರ್, ಪ್ರೇಮಲತಾ, ಜಯಮ್ಮ ಇತರರು ಉಪಸ್ಥಿತರಿದ್ದರು.</p>.ಜಿಲ್ಲೆಯ ವಿವಿಧೆಡೆ ಸ್ವಾತಂತ್ಯ ಸಂಭ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಯುವ ಸಮೂಹ ಮಹಾತ್ಮ ಗಾಂಧಿ ಅವರ ಸಂದೇಶ ಓದಿ, ಅರ್ಥ ಮಾಡಿಕೊಂಡು, ಅದರಂತೆ ನಡೆದುಕೊಳ್ಳಬೇಕು ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಸಲಹೆ ಮಾಡಿದರು.</p>.<p>ನಗರದಲ್ಲಿ ಭಾನುವಾರ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಹಾಲಪ್ಪ ಪ್ರತಿಷ್ಠಾನದಿಂದ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ, ‘ಸ್ವಾತಂತ್ರ ಯೋಧರು, ಅವರ ವಾರಸುದಾರರಿಗೆ ಸರ್ಕಾರದ ಸೌಲಭ್ಯ ಸಿಗಬೇಕು. ವೀರ ಸೌಧಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಮಾಶಾಸನ ಹೆಚ್ಚಿಸಬೇಕು’ ಎಂದರು.</p>.ಬೀದರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಿರಂಗಾ ಯಾತ್ರೆ ಸಂಭ್ರಮ.<p>ನಗರದ ಸ್ವತಂತ್ರ ಚೌಕದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ಲಿಂದ ಮಂಡಿಪೇಟೆ, ಜೆ.ಸಿ.ರಸ್ತೆಯ ಮೂಲಕ ವೀರ ಸೌಧದ ವರೆಗೆ ಮೆರವಣಿಗೆ ನಡೆಯಿತು. ಎಸ್ಬಿಐ ಅಧಿಕಾರಿ ಪ್ರೊ.ಕೆ.ಪುಟ್ಟರಂಗಪ್ಪ ಅವರ ‘ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು’ ಕಿರು ಹೊತ್ತಿಗೆ ಬಿಡುಗಡೆಗೊಳಿಸಲಾಯಿತು.</p>.<p>ಮುಖಂಡರಾದ ರಾಜೇಂದ್ರ ಕಲಘಟಗಿ, ಟಿ.ಆರ್.ಕಲ್ಪನಾ, ಆಶಾ ಪ್ರಸನ್ನಕುಮಾರ್, ಬಿ.ಎಸ್.ಮಂಜುನಾಥ್, ಬಸವರಾಜ ಹಟ್ಟಿಗೌಡರ್, ಶಿವರಾಜು, ಜಗದೀಶ್, ಶಿವಯೋಗಯ್ಯ, ಪುರುಷೋತ್ತಮ್, ಟಿ.ಆರ್.ಸುದರ್ಶನ್, ಪ್ರಸನ್ನಕುಮಾರ್, ಚನ್ನಮಲ್ಲೇಗೌಡ, ಚನ್ನಕೇಶವಯ್ಯ, ಎಸ್.ಸತ್ಯ, ಕೆ.ಎಚ್.ಚಂದ್ರಶೇಖರ್, ಪ್ರೇಮಲತಾ, ಜಯಮ್ಮ ಇತರರು ಉಪಸ್ಥಿತರಿದ್ದರು.</p>.ಜಿಲ್ಲೆಯ ವಿವಿಧೆಡೆ ಸ್ವಾತಂತ್ಯ ಸಂಭ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>