ವಿದ್ಯಾರ್ಥಿಗಳು ಹಾಗೂ ಯುವ ಜನರು ಭಗತ್ ಸಿಂಗ್ ಹಾದಿಯಲ್ಲಿ ಸಾಗಬೇಕಿದೆ. ಬಂಡವಾಳಶಾಹಿ ಶೋಷಣೆಗೆ ಮುಕ್ತಾಯ ಹಾಡಲು ಸಮಾಜವಾದಿ ಕ್ರಾಂತಿ ಅನಿವಾರ್ಯ. ಭಗತ್ ಸಿಂಗ್ ವಿಚಾರಗಳು ಇಂದಿಗೂ ಪ್ರಸ್ತುತವಾಗಿದೆ. ಹಸಿವು, ಬಡತನ, ನಿರುದ್ಯೋಗ ಇಲ್ಲದ ಸಮಾಜವಾದಿ ಭಾರತ ನಿರ್ಮಾಣ ಅವರ ಕನಸಾಗಿತ್ತು. ಅದನ್ನು ನನಸಾಗಿಸುವ ದಾರಿಯಲ್ಲಿ ವಿದ್ಯಾರ್ಥಿಗಳು, ಯುವ ಜನರು ಮುನ್ನಡೆಯಬೇಕು ಎಂದರು.