<p><strong>ತಿಪಟೂರು: </strong>ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಸಂಜೆವರೆಗೂ ಯಾರೂ ಅಂತ್ಯಸಂಸ್ಕಾರ ಮಾಡದ ಕಾರಣ ಗ್ರಾಮ ಪಂಚಾಯಿತಿ ಸದಸ್ಯರೇ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.</p>.<p>ತಾಲ್ಲೂಕಿನ ನಾಗರಘಟ್ಟ ಗ್ರಾಮ ಪಂಚಾಯಿತಿಯ ಕೈದಾಳು ಗ್ರಾಮದಲ್ಲಿ ಸೋಂಕಿತ ಶ್ರೀನಿವಾಸ (45) ಗ್ರಾಮದ ಮುಂಭಾದಲ್ಲೇ ಶುಕ್ರವಾರ ಮೃತಪಟ್ಟಿದ್ದರು. ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿರಲಿಲ್ಲ. ಸಂಬಂಧಿಕರಿಗೆ ವಿಷಯ ತಿಳಿಸಿದರೂ ಅಂತ್ಯಸಂಸ್ಕಾರಕ್ಕೆ ಹಿಂದೇಟು ಹಾಕಿದ್ದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ್, ವೆಂಕಟೇಶ, ಭಾಗ್ಯಮ್ಮ ಅವರೇ ಪಿಪಿಇ ಕಿಟ್ ಧರಿಸಿ, ಸೋಂಕು ಹರಡದಂತೆ ಸ್ಯಾನಿಟೈಸ್ ಮಾಡಿ ಮೃತದೇಹವನ್ನು ಗ್ರಾಮದ ಹೊರ ಭಾಗದಲ್ಲಿ ಅಂತ್ಯಸಂಸ್ಕಾರ ಮಾಡಿದರು. ಗ್ರಾಮದ ಯುವಕರ ಸಹಕರಿಸಿದರು.</p>.<p>‘ಕೋವಿಡ್ ಲಕ್ಷಣಗಳು ಕಂಡುಬಂದ ತಕ್ಷಣ ಕುಟುಂಬಸ್ಥರು ಚಿಕಿತ್ಸೆ ಕೊಡಿಸಬೇಕು. ಗ್ರಾಮ ಪಂಚಾಯಿತಿ ಕಾರ್ಯಪಡೆಗೆ ಮಾಹಿತಿ ನೀಡಿದರೆ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಕೊಡಿಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಸಂಜೆವರೆಗೂ ಯಾರೂ ಅಂತ್ಯಸಂಸ್ಕಾರ ಮಾಡದ ಕಾರಣ ಗ್ರಾಮ ಪಂಚಾಯಿತಿ ಸದಸ್ಯರೇ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.</p>.<p>ತಾಲ್ಲೂಕಿನ ನಾಗರಘಟ್ಟ ಗ್ರಾಮ ಪಂಚಾಯಿತಿಯ ಕೈದಾಳು ಗ್ರಾಮದಲ್ಲಿ ಸೋಂಕಿತ ಶ್ರೀನಿವಾಸ (45) ಗ್ರಾಮದ ಮುಂಭಾದಲ್ಲೇ ಶುಕ್ರವಾರ ಮೃತಪಟ್ಟಿದ್ದರು. ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿರಲಿಲ್ಲ. ಸಂಬಂಧಿಕರಿಗೆ ವಿಷಯ ತಿಳಿಸಿದರೂ ಅಂತ್ಯಸಂಸ್ಕಾರಕ್ಕೆ ಹಿಂದೇಟು ಹಾಕಿದ್ದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ್, ವೆಂಕಟೇಶ, ಭಾಗ್ಯಮ್ಮ ಅವರೇ ಪಿಪಿಇ ಕಿಟ್ ಧರಿಸಿ, ಸೋಂಕು ಹರಡದಂತೆ ಸ್ಯಾನಿಟೈಸ್ ಮಾಡಿ ಮೃತದೇಹವನ್ನು ಗ್ರಾಮದ ಹೊರ ಭಾಗದಲ್ಲಿ ಅಂತ್ಯಸಂಸ್ಕಾರ ಮಾಡಿದರು. ಗ್ರಾಮದ ಯುವಕರ ಸಹಕರಿಸಿದರು.</p>.<p>‘ಕೋವಿಡ್ ಲಕ್ಷಣಗಳು ಕಂಡುಬಂದ ತಕ್ಷಣ ಕುಟುಂಬಸ್ಥರು ಚಿಕಿತ್ಸೆ ಕೊಡಿಸಬೇಕು. ಗ್ರಾಮ ಪಂಚಾಯಿತಿ ಕಾರ್ಯಪಡೆಗೆ ಮಾಹಿತಿ ನೀಡಿದರೆ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಕೊಡಿಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>