<p><strong>ಶಿರಾ</strong>: ‘ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಜಾತಿ ವ್ಯವಸ್ಥೆ ಮತ್ತಷ್ಟು ಬಲವಾಗುತ್ತಿದ್ದು, ಕೋಮುವಾದ ವಿಜೃಂಭಿಸುತ್ತಿರುವುದು ನೋವಿನ ಸಂಗತಿ. ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗಿದರೆ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ತಾಲ್ಲೂಕಿನ ಬರಗೂರು ಆಂಜನೇಯ ಸ್ವಾಮಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ಬೆಂಗಳೂರಿನ ನಾಡೋಜ ಡಾ.ಬರಗೂರು ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ನಡೆದ ನಾಡೋಜ ಡಾ.ಬರಗೂರು ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ ಮತ್ತು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>ಹಿಂದುಳಿದ ಹಳ್ಳಿಯಲ್ಲಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬೆಳೆದ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಚಿಂತನೆ, ಬರವಣಿಗೆ, ನೇರ ಮಾತಿನ ಮೂಲಕ ದೇಶದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ವಿಚಾರ, ಚಿಂತನೆ ಸಮಾಜದ ಶ್ರೇಯಸ್ಸಿಗೆ, ಬದಲಾವಣೆಗೆ ದಿಕ್ಸೂಚಿ. ಯುವಜನತೆಗೆ ಅವರು ಆದರ್ಶವಾಗಬೇಕು ಎಂದು ಹೇಳಿದರು.</p>.<p>ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ಬರಗೂರು ರಾಮಚಂದ್ರಪ್ಪ ಎಂದಿಗೂ ಸ್ವಾರ್ಥಕ್ಕಾಗಿ ಸ್ವಾಭಿಮಾನ ಬಿಟ್ಟುಕೊಡಲಿಲ್ಲ. ನೇರ ನಿಷ್ಠುರವಾದಿಯಾದ ಅವರು ಸಮಾಜಕ್ಕೆ ತನ್ನದೇ ಅದ ಆದರ್ಶಗಳನ್ನು ಕಟ್ಟಿಕೊಟ್ಟಿದ್ದಾರೆ ಎಂದರು.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮಾತನಾಡಿ, ಸಾಮಾನ್ಯ ಕುಟುಂಬದಿಂದ ಬಂದ ಬರಗೂರು ರಾಮಚಂದ್ರಪ್ಪ ರಾಜ್ಯದ ಗಮನ ಸೆಳೆದಿದ್ದು ಅವರ ವಿಚಾರ, ಚಿಂತನೆ ರಾಜ್ಯದಲ್ಲಿ ಬೆಳಗುವಂತಾಗಬೇಕು ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ಬರಗೂರು ರಾಮಚಂದ್ರಪ್ಪ ಅವರು ಈ ರಾಜ್ಯದ ಆಸ್ತಿ. ಅವರ ಹೆಸರಲ್ಲಿ ಸಾಂಸ್ಕೃತಿಕ ಕೇಂದ್ರ ಪ್ರಾರಂಭಿಸಿರುವುದು ಸಂತಸದ ವಿಷಯ. ಇದರಿಂದಾಗಿ ಯುವ ಜನತೆಯಲ್ಲಿ ಸಾಹಿತ್ಯ ಪ್ರೇಮ ಬೆಳೆಸಲು ಅನುಕೂಲವಾಗುವುದು ಎಂದರು.</p>.<p>ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಗ್ರಾ.ಪಂ ಅಧ್ಯಕ್ಷೆ ಮಂಜುಳ ಭೀಮಣ್ಣ, ಉಪವಿಭಾಗಾಧಿಕಾರಿ ರಿಷಿ ಆನಂದ್, ಕಸಾಪ ಅಧ್ಯಕ್ಷ ಪಾಂಡುರಂಗಯ್ಯ, ವೀರಭದ್ರಸ್ವಾಮಿ, ಮುಖಂಡರಾದ ಹಲುಗುಂಡೇಗೌಡ, ಪರಮೇಶ್ ಗೌಡ, ಸತೀಶ್, ತಿಮ್ಮನಹಳ್ಳಿ ವೇಣುಗೋಪಾಲ್, ನರೇಶ್ ಬಾಬು, ರೂಪೇಶ್ ಕೃಷ್ಣಯ್ಯ ಇದ್ದರು.</p>.<p><strong>ಭಾಷೆ ಸಂಸ್ಕೃತಿಯ ಅರಿವು ಮೂಡಿಸಲಿ </strong></p><p>ಸಾಹಿತಿ ಬರಗೂರು ರಾಮಚಂದ್ರಪ್ಪ ಮಾತನಾಡಿ ಹುಟ್ಟೂರಿನಲ್ಲಿ ಸಾಂಸ್ಕೃತಿಕ ಕೇಂದ್ರ ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ರಾಜ್ಯಮಟ್ಟದ ಈ ಕೇಂದ್ರ ಸಾಮಾಜಿಕ ಶೈಕ್ಷಣಿಕ ಬೆಳವಣಿಗೆಗೆ ಕಾರಣವಾಗಿ ಯುವಜನತೆಯಲ್ಲಿ ಭಾಷೆ ಸಾಹಿತ್ಯ ಸಂಸ್ಕೃತಿ ಸ್ಥಳೀಯ ಇತಿಹಾಸದ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ‘ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಜಾತಿ ವ್ಯವಸ್ಥೆ ಮತ್ತಷ್ಟು ಬಲವಾಗುತ್ತಿದ್ದು, ಕೋಮುವಾದ ವಿಜೃಂಭಿಸುತ್ತಿರುವುದು ನೋವಿನ ಸಂಗತಿ. ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗಿದರೆ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ತಾಲ್ಲೂಕಿನ ಬರಗೂರು ಆಂಜನೇಯ ಸ್ವಾಮಿ ಪ್ರೌಢಶಾಲೆ ಆವರಣದಲ್ಲಿ ಬುಧವಾರ ಬೆಂಗಳೂರಿನ ನಾಡೋಜ ಡಾ.ಬರಗೂರು ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ನಡೆದ ನಾಡೋಜ ಡಾ.ಬರಗೂರು ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ ಮತ್ತು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>ಹಿಂದುಳಿದ ಹಳ್ಳಿಯಲ್ಲಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬೆಳೆದ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಚಿಂತನೆ, ಬರವಣಿಗೆ, ನೇರ ಮಾತಿನ ಮೂಲಕ ದೇಶದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ವಿಚಾರ, ಚಿಂತನೆ ಸಮಾಜದ ಶ್ರೇಯಸ್ಸಿಗೆ, ಬದಲಾವಣೆಗೆ ದಿಕ್ಸೂಚಿ. ಯುವಜನತೆಗೆ ಅವರು ಆದರ್ಶವಾಗಬೇಕು ಎಂದು ಹೇಳಿದರು.</p>.<p>ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ಬರಗೂರು ರಾಮಚಂದ್ರಪ್ಪ ಎಂದಿಗೂ ಸ್ವಾರ್ಥಕ್ಕಾಗಿ ಸ್ವಾಭಿಮಾನ ಬಿಟ್ಟುಕೊಡಲಿಲ್ಲ. ನೇರ ನಿಷ್ಠುರವಾದಿಯಾದ ಅವರು ಸಮಾಜಕ್ಕೆ ತನ್ನದೇ ಅದ ಆದರ್ಶಗಳನ್ನು ಕಟ್ಟಿಕೊಟ್ಟಿದ್ದಾರೆ ಎಂದರು.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮಾತನಾಡಿ, ಸಾಮಾನ್ಯ ಕುಟುಂಬದಿಂದ ಬಂದ ಬರಗೂರು ರಾಮಚಂದ್ರಪ್ಪ ರಾಜ್ಯದ ಗಮನ ಸೆಳೆದಿದ್ದು ಅವರ ವಿಚಾರ, ಚಿಂತನೆ ರಾಜ್ಯದಲ್ಲಿ ಬೆಳಗುವಂತಾಗಬೇಕು ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ಬರಗೂರು ರಾಮಚಂದ್ರಪ್ಪ ಅವರು ಈ ರಾಜ್ಯದ ಆಸ್ತಿ. ಅವರ ಹೆಸರಲ್ಲಿ ಸಾಂಸ್ಕೃತಿಕ ಕೇಂದ್ರ ಪ್ರಾರಂಭಿಸಿರುವುದು ಸಂತಸದ ವಿಷಯ. ಇದರಿಂದಾಗಿ ಯುವ ಜನತೆಯಲ್ಲಿ ಸಾಹಿತ್ಯ ಪ್ರೇಮ ಬೆಳೆಸಲು ಅನುಕೂಲವಾಗುವುದು ಎಂದರು.</p>.<p>ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಗ್ರಾ.ಪಂ ಅಧ್ಯಕ್ಷೆ ಮಂಜುಳ ಭೀಮಣ್ಣ, ಉಪವಿಭಾಗಾಧಿಕಾರಿ ರಿಷಿ ಆನಂದ್, ಕಸಾಪ ಅಧ್ಯಕ್ಷ ಪಾಂಡುರಂಗಯ್ಯ, ವೀರಭದ್ರಸ್ವಾಮಿ, ಮುಖಂಡರಾದ ಹಲುಗುಂಡೇಗೌಡ, ಪರಮೇಶ್ ಗೌಡ, ಸತೀಶ್, ತಿಮ್ಮನಹಳ್ಳಿ ವೇಣುಗೋಪಾಲ್, ನರೇಶ್ ಬಾಬು, ರೂಪೇಶ್ ಕೃಷ್ಣಯ್ಯ ಇದ್ದರು.</p>.<p><strong>ಭಾಷೆ ಸಂಸ್ಕೃತಿಯ ಅರಿವು ಮೂಡಿಸಲಿ </strong></p><p>ಸಾಹಿತಿ ಬರಗೂರು ರಾಮಚಂದ್ರಪ್ಪ ಮಾತನಾಡಿ ಹುಟ್ಟೂರಿನಲ್ಲಿ ಸಾಂಸ್ಕೃತಿಕ ಕೇಂದ್ರ ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ರಾಜ್ಯಮಟ್ಟದ ಈ ಕೇಂದ್ರ ಸಾಮಾಜಿಕ ಶೈಕ್ಷಣಿಕ ಬೆಳವಣಿಗೆಗೆ ಕಾರಣವಾಗಿ ಯುವಜನತೆಯಲ್ಲಿ ಭಾಷೆ ಸಾಹಿತ್ಯ ಸಂಸ್ಕೃತಿ ಸ್ಥಳೀಯ ಇತಿಹಾಸದ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>