<p><strong>ಶಿರಾ</strong>: ‘ಬರ ಪರಿಸ್ಥಿತಿ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಜಿಲ್ಲೆಗೆ ₹15 ಕೋಟಿ ಬಿಡುಗಡೆಯಾಗಿದೆ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ನಗರದ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದ ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತ ಸಭೆಯಲ್ಲಿ ಮಾತನಾಡಿದರು. </p>.<p>ಜನವರಿ ನಂತರದ ನಾಲ್ಕು ತಿಂಗಳಲ್ಲಿ ಕುಡಿಯುವ ನೀರು ಹಾಗೂ ಪಶುಗಳಿಗೆ ಮೇವಿನ ತೊಂದರೆಯಾಗದಂತೆ ಬರನಿರ್ವಹಣೆ ಮಾಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನಲ್ಲಿ ಕೃಷಿ, ತೋಟಗಾರಿಕೆ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮಾತನಾಡಿ, ತಾಲ್ಲೂಕಿನಲ್ಲಿ ರಾಸುಗಳ ಸಂಖ್ಯೆ ಹೆಚ್ಚಿದ್ದು, ನೀರಿರುವ ಕೆರೆಗಳ ಸದ್ಬಳಕೆ ಮಾಡಿಕೊಂಡು ಪಶುಗಳಿಗೆ ಮೇವು ಬೆಳೆದು ಮುಂದಿನ ಬೇಸಿಗೆಯಲ್ಲಿ ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು.</p>.<p>ತಾಲ್ಲೂಕಿನಲ್ಲಿ 270 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಸಮಗ್ರ ನಿರ್ವಹಣೆ ಮಾಡಬೇಕು ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ದುರಸ್ತಿಗೆ ಬಂದಿರುವ ಖಾಸಗಿ ಘಟಕಗಳನ್ನು ಸಹ ಸರಿಪಡಿಸಲು ಕ್ರಮವಹಿಸಲಾಗುತ್ತಿದೆ ಎಂದರು.</p>.<p>₹500 ಕೋಟಿ ವೆಚ್ಚದಲ್ಲಿ ನರೇಗಾ ಯೋಜನೆಯಲ್ಲಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 300ರಿಂದ 500 ಜನ ಹಾಗೂ ಪ್ರತಿ ರೈತನಿಗೆ ₹30ರಿಂದ ₹50 ಸಾವಿರದವರೆಗಿನ ಕಾಮಗಾರಿಯಂತೆ ಜಿಲ್ಲೆಯ ಒಂದು ಲಕ್ಷ ರೈತರನ್ನು ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಉಪವಿಭಾಗಾಧಿಕಾರಿ ರಿಷಿ ಆನಂದ್ ಇದ್ದರು.</p>.<p><strong>ಮಾಹಿತಿ ಇಲ್ಲ</strong></p><p>ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಡಾ.ಜಿ.ಪರಮೇಶ್ವರ ಅವರು ಮೊದಲ ಬಾರಿಗೆ ಶಿರಾ ತಾಲ್ಲೂಕಿಗೆ ಬಂದಿದ್ದರು. ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯದ ಕುರಿತು ನಡೆದ ಸಭೆಗೆ ಪತ್ರಕರ್ತರಿಗೆ ಮಾಹಿತಿ ನೀಡದೆ ಅವರನ್ನು ದೂರವಿಟ್ಟು ಸಭೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ‘ಬರ ಪರಿಸ್ಥಿತಿ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಜಿಲ್ಲೆಗೆ ₹15 ಕೋಟಿ ಬಿಡುಗಡೆಯಾಗಿದೆ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.</p>.<p>ನಗರದ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದ ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತ ಸಭೆಯಲ್ಲಿ ಮಾತನಾಡಿದರು. </p>.<p>ಜನವರಿ ನಂತರದ ನಾಲ್ಕು ತಿಂಗಳಲ್ಲಿ ಕುಡಿಯುವ ನೀರು ಹಾಗೂ ಪಶುಗಳಿಗೆ ಮೇವಿನ ತೊಂದರೆಯಾಗದಂತೆ ಬರನಿರ್ವಹಣೆ ಮಾಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನಲ್ಲಿ ಕೃಷಿ, ತೋಟಗಾರಿಕೆ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಮಾತನಾಡಿ, ತಾಲ್ಲೂಕಿನಲ್ಲಿ ರಾಸುಗಳ ಸಂಖ್ಯೆ ಹೆಚ್ಚಿದ್ದು, ನೀರಿರುವ ಕೆರೆಗಳ ಸದ್ಬಳಕೆ ಮಾಡಿಕೊಂಡು ಪಶುಗಳಿಗೆ ಮೇವು ಬೆಳೆದು ಮುಂದಿನ ಬೇಸಿಗೆಯಲ್ಲಿ ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದರು.</p>.<p>ತಾಲ್ಲೂಕಿನಲ್ಲಿ 270 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಸಮಗ್ರ ನಿರ್ವಹಣೆ ಮಾಡಬೇಕು ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ದುರಸ್ತಿಗೆ ಬಂದಿರುವ ಖಾಸಗಿ ಘಟಕಗಳನ್ನು ಸಹ ಸರಿಪಡಿಸಲು ಕ್ರಮವಹಿಸಲಾಗುತ್ತಿದೆ ಎಂದರು.</p>.<p>₹500 ಕೋಟಿ ವೆಚ್ಚದಲ್ಲಿ ನರೇಗಾ ಯೋಜನೆಯಲ್ಲಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 300ರಿಂದ 500 ಜನ ಹಾಗೂ ಪ್ರತಿ ರೈತನಿಗೆ ₹30ರಿಂದ ₹50 ಸಾವಿರದವರೆಗಿನ ಕಾಮಗಾರಿಯಂತೆ ಜಿಲ್ಲೆಯ ಒಂದು ಲಕ್ಷ ರೈತರನ್ನು ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಉಪವಿಭಾಗಾಧಿಕಾರಿ ರಿಷಿ ಆನಂದ್ ಇದ್ದರು.</p>.<p><strong>ಮಾಹಿತಿ ಇಲ್ಲ</strong></p><p>ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಡಾ.ಜಿ.ಪರಮೇಶ್ವರ ಅವರು ಮೊದಲ ಬಾರಿಗೆ ಶಿರಾ ತಾಲ್ಲೂಕಿಗೆ ಬಂದಿದ್ದರು. ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯದ ಕುರಿತು ನಡೆದ ಸಭೆಗೆ ಪತ್ರಕರ್ತರಿಗೆ ಮಾಹಿತಿ ನೀಡದೆ ಅವರನ್ನು ದೂರವಿಟ್ಟು ಸಭೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>