ನಾನೂ 8 ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ನೂರಾರು ಸಭೆ ಮಾಡಿದ್ದೇನೆ. ಸಿದ್ದರಾಮಯ್ಯ, ಹರಿಪ್ರಸಾದ್, ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಇದ್ದರು. ಯಾವ ಹಿರಿಯ ನಾಯಕರೂ ಆ ರೀತಿ ನಡೆದುಕೊಂಡಿಲ್ಲ ಎಂದರು.ಮುನಿಯಪ್ಪರ ಸೋಲಿಗೆ ಕಾರಣ ಗೊತ್ತಿಲ್ಲ. ಅವರು ಕೆಪಿಸಿಸಿಗೆ ದೂರು ಕೊಟ್ಟಿದ್ದಾರೆ, ನಮ್ಮವರೇ ನನ್ನ ಸೋಲಿಗೆ ಕಾರಣ ಎಂದು ದೂರಿನಲ್ಲಿ ಹೇಳಿದ್ದಾರೆ ಎಂಬುದನ್ನು ತಿಳಿದಿದ್ದೇನೆ.ದೂರು ಪರಿಶೀಲನೆ ಮಾಡಿ ಅಂಥವರ ವಿರುದ್ದ ಅಧ್ಯಕ್ಷರು ಕ್ರಮ ಕೈಗೊಳ್ಳಲಿದ್ದಾರೆಎಂದು ಹೇಳಿದರು.