<p><strong>ಹುಳಿಯಾರು:</strong> ಗೌರಿ- ಗಣೇಶನ ಹಬ್ಬಕ್ಕೆ ಸಾಮಗ್ರಿ ಖರೀದಿಸಲು ಪಟ್ಟಣದಲ್ಲಿ ಶುಕ್ರವಾರ ಜನಸಂದಣಿ ಸೇರಿದ್ದು, ಗಣೇಶ ಮೂರ್ತಿಗಳ ವ್ಯಾಪಾರ ಜೋರಾಗಿತ್ತು.</p>.<p>ಹಣ್ಣು, ಹೂವು, ಸೌತೆಕಾಯಿ, ಬಾಗಿನದ ಸಾಮಗ್ರಿ ಖರೀದಿಸಿದರು. ಎಲ್ಲೆಡೆ ದ್ವಿಚಕ್ರ ವಾಹನಗಳ ಸಾಲು ನಿಂತಿತ್ತು. ಗುರುವಾರ ಸಂತೆ ದಿನವಾಗಿದ್ದು ಶುಕ್ರವಾರವೂ ಸಂತೆ ಚಿತ್ರಣ ಕಂಡುಬಂತು. ಉಳಿದಂತೆ ಜವಳಿ ಹಾಗೂ ಸಿದ್ಧ ಉಡುಪುಗಳ ಅಂಗಡಿಯಲ್ಲಿಯೂ ಜನರು ತುಂಬಿದ್ದರು.</p>.<p>ಗಣೇಶನ ಮೂರ್ತಿಗೆ ಬೇಡಿಕೆ: ಗಣೇಶ ಮೂರ್ತಿಗಳನ್ನು ಪಟ್ಟಣದ ಬಸ್ನಿಲ್ದಾಣ, ರಂಗನಾಥ ಸ್ವಾಮಿ ದೇಗುಲದ ಮುಂಭಾಗ, ಎಣ್ಣೆ ಗಾಣದ ಆವರಣ, ತಿಪಟೂರು ರಸ್ತೆಯಲ್ಲಿ ಸಾಕಷ್ಟು ಕಡೆ ಮಾರಾಟಕ್ಕೆ ಇಡಲಾಗಿತ್ತು. ಚಿಕ್ಕ ಗಣಪತಿಯಿಂದ ಹಿಡಿದು ಮಧ್ಯಮ ಗಾತ್ರ ಹಾಗೂ 6 ಅಡಿ ಎತ್ತರದವರೆಗಿನ ಸುಂದರ ಗಣೇಶನ ಮೂರ್ತಿಗಳು ಮಾರಾಟಕ್ಕೆ ಇದ್ದವು.</p>.<p>ಗಣೇಶ ಪ್ರತಿಷ್ಠಾಪನೆಗೆ ಸರ್ಕಾರದ ಮಾರ್ಗಸೂಚಿಗಳಿದ್ದು ಪೊಲೀಸ್, ಬೆಸ್ಕಾಂ ಸೇರಿದಂತೆ ಇತರ ಇಲಾಖೆಗಳ ಅನುಮತಿ ಪಡೆಯಬೇಕು ಎಂಬ ನಿಯಮದ ನಡುವೆಯೂ ಗ್ರಾಮಗಳಿಂದ ಯುವಕರ ಗುಂಪು ತಂಡೋಪತಂಡವಾಗಿ ಬಂದು ಮೂರ್ತಿಗಳನ್ನು ಖರೀದಿಸಿದರು.</p>.<p>ಯಾವುದೇ ಸಮಸ್ಯೆ ಇಲ್ಲದೆ ಹೋದರೂ ವ್ಯಾಪಾರ ಸ್ವಲ್ಪ ಕಷ್ಟವಾಗಿದೆ. ಗಣೇಶ ಮೂರ್ತಿಗಳ ತಯಾರಿಕೆ ಕೂಲಿ, ಬಣ್ಣ ಸೇರಿದಂತೆ ಇತರೆ ಖರ್ಚುಗಳು ಹೆಚ್ಚು ತಗುಲುತ್ತದೆ. ಆದರೆ ಜನರು ಕಡಿಮೆ ಬೆಲೆಗೆ ಕೇಳುತ್ತಾರೆ. ವಿಧಿಯಲ್ಲದೆ ಕೊಡಲೇಬೇಕು ಎಂದು ಗಣೇಶಮೂರ್ತಿಗಳ ವ್ಯಾಪಾರಿ ಸೋರಲಮಾವು ಪ್ರವೀಣ್ ತಿಳಿಸಿದರು.</p>.<p>‘ಗಣೇಶ ಮೂರ್ತಿಗಳು ಈ ಬಾರಿ ಬೆಲೆ ಹೆಚ್ಚಾಗಿದ್ದು ನಾಲ್ಕು ಅಡಿ ಎತ್ತರದ ಗಣೇಶ ಮೂರ್ತಿಯನ್ನು ₹5 ಸಾವಿರಕ್ಕೆ ಕೊಂಡಿದ್ದೇವೆ’ ಎಂದು ಮರಾಠಿ ಪಾಳ್ಯದ ಯುವಕರು ಪ್ರತಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು:</strong> ಗೌರಿ- ಗಣೇಶನ ಹಬ್ಬಕ್ಕೆ ಸಾಮಗ್ರಿ ಖರೀದಿಸಲು ಪಟ್ಟಣದಲ್ಲಿ ಶುಕ್ರವಾರ ಜನಸಂದಣಿ ಸೇರಿದ್ದು, ಗಣೇಶ ಮೂರ್ತಿಗಳ ವ್ಯಾಪಾರ ಜೋರಾಗಿತ್ತು.</p>.<p>ಹಣ್ಣು, ಹೂವು, ಸೌತೆಕಾಯಿ, ಬಾಗಿನದ ಸಾಮಗ್ರಿ ಖರೀದಿಸಿದರು. ಎಲ್ಲೆಡೆ ದ್ವಿಚಕ್ರ ವಾಹನಗಳ ಸಾಲು ನಿಂತಿತ್ತು. ಗುರುವಾರ ಸಂತೆ ದಿನವಾಗಿದ್ದು ಶುಕ್ರವಾರವೂ ಸಂತೆ ಚಿತ್ರಣ ಕಂಡುಬಂತು. ಉಳಿದಂತೆ ಜವಳಿ ಹಾಗೂ ಸಿದ್ಧ ಉಡುಪುಗಳ ಅಂಗಡಿಯಲ್ಲಿಯೂ ಜನರು ತುಂಬಿದ್ದರು.</p>.<p>ಗಣೇಶನ ಮೂರ್ತಿಗೆ ಬೇಡಿಕೆ: ಗಣೇಶ ಮೂರ್ತಿಗಳನ್ನು ಪಟ್ಟಣದ ಬಸ್ನಿಲ್ದಾಣ, ರಂಗನಾಥ ಸ್ವಾಮಿ ದೇಗುಲದ ಮುಂಭಾಗ, ಎಣ್ಣೆ ಗಾಣದ ಆವರಣ, ತಿಪಟೂರು ರಸ್ತೆಯಲ್ಲಿ ಸಾಕಷ್ಟು ಕಡೆ ಮಾರಾಟಕ್ಕೆ ಇಡಲಾಗಿತ್ತು. ಚಿಕ್ಕ ಗಣಪತಿಯಿಂದ ಹಿಡಿದು ಮಧ್ಯಮ ಗಾತ್ರ ಹಾಗೂ 6 ಅಡಿ ಎತ್ತರದವರೆಗಿನ ಸುಂದರ ಗಣೇಶನ ಮೂರ್ತಿಗಳು ಮಾರಾಟಕ್ಕೆ ಇದ್ದವು.</p>.<p>ಗಣೇಶ ಪ್ರತಿಷ್ಠಾಪನೆಗೆ ಸರ್ಕಾರದ ಮಾರ್ಗಸೂಚಿಗಳಿದ್ದು ಪೊಲೀಸ್, ಬೆಸ್ಕಾಂ ಸೇರಿದಂತೆ ಇತರ ಇಲಾಖೆಗಳ ಅನುಮತಿ ಪಡೆಯಬೇಕು ಎಂಬ ನಿಯಮದ ನಡುವೆಯೂ ಗ್ರಾಮಗಳಿಂದ ಯುವಕರ ಗುಂಪು ತಂಡೋಪತಂಡವಾಗಿ ಬಂದು ಮೂರ್ತಿಗಳನ್ನು ಖರೀದಿಸಿದರು.</p>.<p>ಯಾವುದೇ ಸಮಸ್ಯೆ ಇಲ್ಲದೆ ಹೋದರೂ ವ್ಯಾಪಾರ ಸ್ವಲ್ಪ ಕಷ್ಟವಾಗಿದೆ. ಗಣೇಶ ಮೂರ್ತಿಗಳ ತಯಾರಿಕೆ ಕೂಲಿ, ಬಣ್ಣ ಸೇರಿದಂತೆ ಇತರೆ ಖರ್ಚುಗಳು ಹೆಚ್ಚು ತಗುಲುತ್ತದೆ. ಆದರೆ ಜನರು ಕಡಿಮೆ ಬೆಲೆಗೆ ಕೇಳುತ್ತಾರೆ. ವಿಧಿಯಲ್ಲದೆ ಕೊಡಲೇಬೇಕು ಎಂದು ಗಣೇಶಮೂರ್ತಿಗಳ ವ್ಯಾಪಾರಿ ಸೋರಲಮಾವು ಪ್ರವೀಣ್ ತಿಳಿಸಿದರು.</p>.<p>‘ಗಣೇಶ ಮೂರ್ತಿಗಳು ಈ ಬಾರಿ ಬೆಲೆ ಹೆಚ್ಚಾಗಿದ್ದು ನಾಲ್ಕು ಅಡಿ ಎತ್ತರದ ಗಣೇಶ ಮೂರ್ತಿಯನ್ನು ₹5 ಸಾವಿರಕ್ಕೆ ಕೊಂಡಿದ್ದೇವೆ’ ಎಂದು ಮರಾಠಿ ಪಾಳ್ಯದ ಯುವಕರು ಪ್ರತಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>