ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೂಳೂರು ಗಣೇಶ ವಿಸರ್ಜನೆ

Last Updated 25 ಜನವರಿ 2021, 1:27 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾರ ಸಮ್ಮುಖದಲ್ಲಿ ಭಾನುವಾರ ವೈಭವವಾಗಿ ನಡೆಯಿತು.

ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗೂಳೂರು ಕೆರೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧ ಭಾಗಗಳ ಸಹಸ್ರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.

ಶನಿವಾರ ಸಂಜೆ 7ಕ್ಕೆ ಊರಿನ ಯಜಮಾನರ ಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾ ಮಂಗಳಾರತಿ ನೆರವೇರಿಸಲಾಯಿತು. ನಂತರ ಮಹಾಗಣಪತಿಯನ್ನು ದೇವಾಲಯದ ಗೋಪುರದಿಂದ ಹೊರತಂದು ಅಲಂಕೃತ ವಾಹನದಲ್ಲಿ ಕೂರಿಸಲಾಯಿತು. ಮಧ್ಯರಾತ್ರಿವರೆಗೂ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು.

ಭಾನುವಾರ ಮಧ್ಯಾಹ್ನದಿಂದ ವಿವಿಧ ಜನಪದ ಕಲಾತಂಡಗಳು ಹಾಗೂ ಆಕರ್ಷಕ ಬಾಣ ಬಿರುಸು, ಸಿಡಿಮದ್ದಿನ ಸದ್ದಿನೊಂದಿಗೆ ಮತ್ತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಭಕ್ತರು, ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಗೂಳೂರು ಮಹಾಗಣಪತಿ ಭಕ್ತಮಂಡಳಿ ಅಧ್ಯಕ್ಷ ಶಿವಕುಮಾರ್ ಹಾಗೂ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT