<p><strong>ಶಿರಾ:</strong> ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಶನಿವಾರ ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ ಬಾರಿ ರಸ್ತೆ ಬದಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದ ಕಾರಣ ಮನೆ ಮತ್ತು ಕೆಲವು ದೇವಾಲಯಗಳಲ್ಲಿ ಮಾತ್ರ ಪ್ರತಿಷ್ಠಾಪಿಸಲಾಗಿತ್ತು. ಸಂಜೆ ವೇಳೆಗೆ ಗಣೇಶ ವಿಸರ್ಜನೆ ಮಾಡಲಾಯಿತು.</p>.<p>ವಿಸರ್ಜನೆಗೆ ನಗರಸಭೆಯಿಂದ ವಾಹನ ವ್ಯವಸ್ಥೆ ಮಾಡಿದ್ದು, ಮನೆಯ ಬಳಿ ವಾಹನ ಬಂದಾಗ ಕೆಲವರು ವಿಸರ್ಜನೆ ಮಾಡಿದರೆ, ಮತ್ತೇ ಕೆಲವರು ಜಾಜಮ್ಮನ ಕಟ್ಟೆಯಲ್ಲಿ ಗಣೇಶ ವಿಸರ್ಜನೆ ಮಾಡಿದರು.</p>.<p>ನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, 5 ದಿನಗಳ ನಂತರ ವಿಸರ್ಜನೆ ಮಾಡಲಿದ್ದಾರೆ. ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಕೇವಲ ಪೂಜೆ ಮಾತ್ರ ಮಾಡಲಾಗುತ್ತಿದೆ.</p>.<p>ಅದ್ಧೂರಿಯಾಗಿ ಗಣೇಶ ವಿಸರ್ಜನೆಯನ್ನು ಮಾಡುತ್ತಿದ್ದ ಹಿಂದೂ ಪರ ಸಂಘಟನೆಗಳು ಈ ಬಾರಿ ನಗರದ ಗವಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿ ಸಂಜೆ ವಿಸರ್ಜನೆ ಮಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಶನಿವಾರ ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ ಬಾರಿ ರಸ್ತೆ ಬದಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದ ಕಾರಣ ಮನೆ ಮತ್ತು ಕೆಲವು ದೇವಾಲಯಗಳಲ್ಲಿ ಮಾತ್ರ ಪ್ರತಿಷ್ಠಾಪಿಸಲಾಗಿತ್ತು. ಸಂಜೆ ವೇಳೆಗೆ ಗಣೇಶ ವಿಸರ್ಜನೆ ಮಾಡಲಾಯಿತು.</p>.<p>ವಿಸರ್ಜನೆಗೆ ನಗರಸಭೆಯಿಂದ ವಾಹನ ವ್ಯವಸ್ಥೆ ಮಾಡಿದ್ದು, ಮನೆಯ ಬಳಿ ವಾಹನ ಬಂದಾಗ ಕೆಲವರು ವಿಸರ್ಜನೆ ಮಾಡಿದರೆ, ಮತ್ತೇ ಕೆಲವರು ಜಾಜಮ್ಮನ ಕಟ್ಟೆಯಲ್ಲಿ ಗಣೇಶ ವಿಸರ್ಜನೆ ಮಾಡಿದರು.</p>.<p>ನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, 5 ದಿನಗಳ ನಂತರ ವಿಸರ್ಜನೆ ಮಾಡಲಿದ್ದಾರೆ. ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಕೇವಲ ಪೂಜೆ ಮಾತ್ರ ಮಾಡಲಾಗುತ್ತಿದೆ.</p>.<p>ಅದ್ಧೂರಿಯಾಗಿ ಗಣೇಶ ವಿಸರ್ಜನೆಯನ್ನು ಮಾಡುತ್ತಿದ್ದ ಹಿಂದೂ ಪರ ಸಂಘಟನೆಗಳು ಈ ಬಾರಿ ನಗರದ ಗವಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿ ಸಂಜೆ ವಿಸರ್ಜನೆ ಮಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>