<p><strong>ತುಮಕೂರು</strong>: ಕೊಳವೆಬಾವಿಗೆ ಪಾಯಿಂಟ್ ಗುರುತಿಸಲು ₹4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಂತರ್ಜಲ ನಿರ್ದೇಶನಾಲಯದ ಪ್ರಭಾರಿ ಹಿರಿಯ ಭೂ ವಿಜ್ಞಾನಿ ಟಿ.ವೆಂಕಟೇಶ್ ಎಂಬುವರಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 3 ವರ್ಷ 6 ತಿಂಗಳು ಜೈಲು ಶಿಕ್ಷೆ, ₹15 ಸಾವಿರ ದಂಡ ವಿಧಿಸಿದೆ.</p>.<p>ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ಗೌಡಿಹಳ್ಳಿ ಗೊಲ್ಲರಹಟ್ಟಿಯ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಬೋರ್ವೆಲ್ ಕರೆಸಲು ನೋಂದಣಿಗೆ ₹1,500, ಪಾಯಿಂಟ್ ಮಾಡಲು ₹3 ಸಾವಿರ ಲಂಚ ಕೇಳಿದ್ದರು. ಸಿದ್ದಪ್ಪ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಲಿಖಿತ ದೂರು ನೀಡಿದ್ದರು. ಎಸಿಬಿ ಪೊಲೀಸ್ ಡಿವೈಎಸ್ಪಿ ವಿ.ರಘುಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಎಸ್.ಎನ್.ಹಾಲಪ್ಪ ತನಿಖೆ ನಡೆಸಿದ್ದರು. ಜೆ.ರಮೇಶ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಶುಕ್ರವಾರ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕೊಳವೆಬಾವಿಗೆ ಪಾಯಿಂಟ್ ಗುರುತಿಸಲು ₹4,500 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಂತರ್ಜಲ ನಿರ್ದೇಶನಾಲಯದ ಪ್ರಭಾರಿ ಹಿರಿಯ ಭೂ ವಿಜ್ಞಾನಿ ಟಿ.ವೆಂಕಟೇಶ್ ಎಂಬುವರಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 3 ವರ್ಷ 6 ತಿಂಗಳು ಜೈಲು ಶಿಕ್ಷೆ, ₹15 ಸಾವಿರ ದಂಡ ವಿಧಿಸಿದೆ.</p>.<p>ತಾಲ್ಲೂಕಿನ ಬೆಳ್ಳಾವಿ ಹೋಬಳಿಯ ಗೌಡಿಹಳ್ಳಿ ಗೊಲ್ಲರಹಟ್ಟಿಯ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಬೋರ್ವೆಲ್ ಕರೆಸಲು ನೋಂದಣಿಗೆ ₹1,500, ಪಾಯಿಂಟ್ ಮಾಡಲು ₹3 ಸಾವಿರ ಲಂಚ ಕೇಳಿದ್ದರು. ಸಿದ್ದಪ್ಪ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಲಿಖಿತ ದೂರು ನೀಡಿದ್ದರು. ಎಸಿಬಿ ಪೊಲೀಸ್ ಡಿವೈಎಸ್ಪಿ ವಿ.ರಘುಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಎಸ್.ಎನ್.ಹಾಲಪ್ಪ ತನಿಖೆ ನಡೆಸಿದ್ದರು. ಜೆ.ರಮೇಶ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಶುಕ್ರವಾರ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಆರ್.ಪಿ.ಪ್ರಕಾಶ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>