ತುಮಕೂರು: ಮಧುಗಿರಿ ಪಟ್ಟಣದ ದಂಡಿನಮಾರಮ್ಮ ದೇವಾಲಯದ ಜಾತ್ರಾ ಬಯಲಿನಲ್ಲಿ ವಿದ್ಯಾರ್ಥಿನಿ ಶವ ಬೇವಿನ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.
ತಾಲ್ಲೂಕಿನ ಕಸಬಾ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಹನುಮಂತರಾಯಪ್ಪ ಎಂಬುವರ ಪುತ್ರಿ ಅಶ್ವಿನಿ (19) ಮೃತಪಟ್ಟ ದುರ್ದೈವಿ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅಶ್ವಿನಿಯನ್ನು ಕೊಲೆ ಮಾಡಲಾಗಿದೆ. ತನಿಖೆ ನಡೆಸಬೇಕು ಎಂದು ಕೋರಿ ಮೃತಳ ತಾಯಿ ಮಧುಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.