ತುಮಕೂರು: ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಒಳಗೊಂಡ ಭೌಗೋಳಿಕ ಮಾಹಿತಿ ಸ್ತರ (ಜಿಐಎಸ್) ಮತ್ತು ಶುದ್ಧ ನೀರಿಗೆ ಸಂಬಂಧಿಸಿದ ಮೊಬೈಲ್ ಅಪ್ಲಿಕೇಷನ್ ಅನ್ನು ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು ಬಿಡುಗಡೆ ಮಾಡಿದರು.
ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳ ಸಾಮಾನ್ಯ ಮಾಹಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಯೋಜನಾವಾರು ಮಾಹಿತಿ ಈ ಜಿಐಎಸ್ ನಲ್ಲಿ ಅಡಕವಾಗಿದೆ.
ಜಿ.ಪಂ ಸಿಇಒ ಶುಭಾ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ವೇದಿಕೆಯಲ್ಲಿ ಇದ್ದಾರೆ.