ತುಮಕೂರು: ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲೀಗ್ ಜಮಾತ್ ಕೇಂದ್ರ ಕಚೇರಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದವರು ಇದ್ದರೆ, ಅವರ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್ ಮನವಿ ಮಾಡಿದ್ದಾರೆ.
ಈ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ 19 ಜನರನ್ನು ಈವರೆಗೂ ಪತ್ತೆ ಹಚ್ಚಲಾಗಿದೆ. ಅವರಿಗೆ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಐಸೋಲೇಷನ್ ವಾರ್ಡ್ಗಳಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 8ರಿಂದ 20ರ ವರೆಗೆ ನಡೆದ ಸಭೆಯಲ್ಲಿ ಜಿಲ್ಲೆಯಿಂದ ಇನ್ನೂ ಹೆಚ್ಚಿನ ಜನರು ಪಾಲ್ಗೊಂಡಿರುವ ಸಾಧ್ಯತೆ ಇದೆ. ಹಾಗಾಗಿ ಅವರ ಮಾಹಿತಿಯನ್ನು ಜಿಲ್ಲಾಡಳಿತದ ಸಹಾಯವಾಣಿಯೊಂದಿಗೆ (0816-2252936) ಹಂಚಿಕೊಳ್ಳಿ ಎಂದಿದ್ದಾರೆ.
12 ವರದಿ ಬರಬೇಕಿದೆ:ಗುರುವಾರಕ್ಕೆ ಕೊನೆಗೊಂಡಂತೆ ಜಿಲ್ಲೆಯಲ್ಲಿನ 132 ಜನರ ಗಂಟಲು ದ್ರವವನ್ನುಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರಲ್ಲಿ ಇನ್ನೂ 12 ಜನರ ವರದಿ ಬರಬೇಕಿದೆ. ಈಗಾಗಲೇ ಪರೀಕ್ಷಿಸಿದ 115 ಜನರಲ್ಲಿ ಸೋಂಕು ಕಂಡುಬಂದಿಲ್ಲ.