<p><strong>ಪಾವಗಡ: </strong>ತಾಲ್ಲೂಕಿನ ತಿರುಮಣಿ ಬಳಿಯ ಸೋಲಾರ್ ವಿದ್ಯುತ್ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸ್ಥಳೀಯರು ಬುಧವಾರ ಧರಣಿ ನಡೆಸಿದರು.</p>.<p>ಘಟಕ ನಿರ್ಮಾಣಕ್ಕೆ ಸ್ಥಳೀಯ ರೈತರು ತಮ್ಮ ಜಮೀನುಗಳನ್ನು ಕಡಿಮೆ ಬೆಲೆಗೆ ಗುತ್ತಿಗೆ ನೀಡಿದ್ದಾರೆ. ಬಹಳಷ್ಟು ರೈತರು ವ್ಯವಸಾಯಕ್ಕೆ ಜಮೀನಿಲ್ಲದೆ ಇತರ ಉದ್ಯೋಗ ಅವಲಂಭಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಘಟಕದಲ್ಲಿರುವ ತಾಂತ್ರಿಕ, ಭದ್ರತಾ ಹುದ್ದೆಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಧರಣಿನಿರತರು ಆರೋಪಿಸಿದರು.</p>.<p>ಸ್ಥಳೀಯ ನಿರುದ್ಯೋಗಿ ಯುವಕರಿಗೆ ಕೆಲಸ ನೀಡುವ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಮನ್ನಣೆ ನೀಡಿಲ್ಲ. ಇಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಕಂಪನಿಯವರು ಸ್ಥಳೀಯರ ವಿರುದ್ಧ ದೌರ್ಜನ್ಯದಿಂದ ನಡೆದು<br />ಕೊಳ್ಳುತ್ತಿದ್ದಾರೆ. ಕಂಪನಿಗಳು ಸೂಕ್ತ ಕ್ರಮ ವಹಿಸದಿದ್ದರೆ ಹೋರಾಟ ತೀವ್ರ ಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಉದ್ಯೋಗ ಕಡಿತಗೊಳಿಸಬಾರದು, ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಮಲ್ಲಿಕಾರ್ಜುನ್, ಆಂಜನೇಯುಲು, ನಾಗಭೂಷಣ್, ಮಲ್ಲಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ತಾಲ್ಲೂಕಿನ ತಿರುಮಣಿ ಬಳಿಯ ಸೋಲಾರ್ ವಿದ್ಯುತ್ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸ್ಥಳೀಯರು ಬುಧವಾರ ಧರಣಿ ನಡೆಸಿದರು.</p>.<p>ಘಟಕ ನಿರ್ಮಾಣಕ್ಕೆ ಸ್ಥಳೀಯ ರೈತರು ತಮ್ಮ ಜಮೀನುಗಳನ್ನು ಕಡಿಮೆ ಬೆಲೆಗೆ ಗುತ್ತಿಗೆ ನೀಡಿದ್ದಾರೆ. ಬಹಳಷ್ಟು ರೈತರು ವ್ಯವಸಾಯಕ್ಕೆ ಜಮೀನಿಲ್ಲದೆ ಇತರ ಉದ್ಯೋಗ ಅವಲಂಭಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಘಟಕದಲ್ಲಿರುವ ತಾಂತ್ರಿಕ, ಭದ್ರತಾ ಹುದ್ದೆಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಧರಣಿನಿರತರು ಆರೋಪಿಸಿದರು.</p>.<p>ಸ್ಥಳೀಯ ನಿರುದ್ಯೋಗಿ ಯುವಕರಿಗೆ ಕೆಲಸ ನೀಡುವ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಮನ್ನಣೆ ನೀಡಿಲ್ಲ. ಇಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಕಂಪನಿಯವರು ಸ್ಥಳೀಯರ ವಿರುದ್ಧ ದೌರ್ಜನ್ಯದಿಂದ ನಡೆದು<br />ಕೊಳ್ಳುತ್ತಿದ್ದಾರೆ. ಕಂಪನಿಗಳು ಸೂಕ್ತ ಕ್ರಮ ವಹಿಸದಿದ್ದರೆ ಹೋರಾಟ ತೀವ್ರ ಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಉದ್ಯೋಗ ಕಡಿತಗೊಳಿಸಬಾರದು, ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಶ್ರೀನಿವಾಸ್, ಮಲ್ಲಿಕಾರ್ಜುನ್, ಆಂಜನೇಯುಲು, ನಾಗಭೂಷಣ್, ಮಲ್ಲಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>