<p><strong>ಚಿಕ್ಕನಾಯಕನಹಳ್ಳಿ:</strong> ‘ಪಟ್ಟಣ ಹಾಗೂ ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿ, ಗಂಭೀರ ಸ್ಥಿತಿಗೆ ಬಂದಾಗ ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಿ’ ಎಂದು ತಹಶೀಲ್ದಾರ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕೋವಿಡ್- 19 ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಯಿತು.</p>.<p>ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗಾಗಿಯೇ 50 ಹಾಸಿಗೆಗಳನ್ನು ಮೀಸಲಿಡಬೇಕು ಹಾಗೂ ಆಮ್ಲಜನಕದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.</p>.<p>ತಹಶೀಲ್ದಾರ್ ತೇಜಸ್ವಿನಿ ಮಾತನಾಡಿ, ತಾಲ್ಲೂಕಿನಲ್ಲಿ ಈವರೆಗೆ 118 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈಗಾಗಲೇ 75 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.</p>.<p>ತಾಲ್ಲೂಕಿನಲ್ಲಿ ಈವರೆಗೆ ಒಟ್ಟು 40 ಕಂಟೈನ್ಮೆಂಟ್ ಜೋನ್ ಮಾಡಿದ್ದು ಅದರಲ್ಲಿ 17 ಅಟೆಂಡಮ್ ಕಂಟೈನ್ಮೆಂಟ್ ಜೋನ್ಗಳಿವೆ. ಅಲ್ಲಿ ಒಟ್ಟು 79 ರೋಗಿಗಳಿದ್ದಾರೆ ಎಂದರು.</p>.<p>ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಅಥಿಕ್ ಪಾಷ ಹಾಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಕುಮಾರಸ್ವಾಮಿ, ಸರ್ಕಲ್ ಇನ್ಸ್ಪೆಕ್ಟರ್ ವೀಣಾ, ಸಬ್ಇನ್ಸ್ಪೆಕ್ಟರ್ ಶಿವಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ‘ಪಟ್ಟಣ ಹಾಗೂ ಹುಳಿಯಾರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿ, ಗಂಭೀರ ಸ್ಥಿತಿಗೆ ಬಂದಾಗ ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಿ’ ಎಂದು ತಹಶೀಲ್ದಾರ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕೋವಿಡ್- 19 ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಯಿತು.</p>.<p>ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗಾಗಿಯೇ 50 ಹಾಸಿಗೆಗಳನ್ನು ಮೀಸಲಿಡಬೇಕು ಹಾಗೂ ಆಮ್ಲಜನಕದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.</p>.<p>ತಹಶೀಲ್ದಾರ್ ತೇಜಸ್ವಿನಿ ಮಾತನಾಡಿ, ತಾಲ್ಲೂಕಿನಲ್ಲಿ ಈವರೆಗೆ 118 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈಗಾಗಲೇ 75 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.</p>.<p>ತಾಲ್ಲೂಕಿನಲ್ಲಿ ಈವರೆಗೆ ಒಟ್ಟು 40 ಕಂಟೈನ್ಮೆಂಟ್ ಜೋನ್ ಮಾಡಿದ್ದು ಅದರಲ್ಲಿ 17 ಅಟೆಂಡಮ್ ಕಂಟೈನ್ಮೆಂಟ್ ಜೋನ್ಗಳಿವೆ. ಅಲ್ಲಿ ಒಟ್ಟು 79 ರೋಗಿಗಳಿದ್ದಾರೆ ಎಂದರು.</p>.<p>ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಅಥಿಕ್ ಪಾಷ ಹಾಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಕುಮಾರಸ್ವಾಮಿ, ಸರ್ಕಲ್ ಇನ್ಸ್ಪೆಕ್ಟರ್ ವೀಣಾ, ಸಬ್ಇನ್ಸ್ಪೆಕ್ಟರ್ ಶಿವಯ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>