<p><strong>ತುಮಕೂರು</strong>: ‘ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ನೀಡುವ ಹಣ ಕಳೆದ ನಾಲ್ಕು ತಿಂಗಳಿನಿಂದ ಪಾವತಿಯಾಗಿಲ್ಲ. ಹಣದ ಬದಲಾಗಿ ಅಗತ್ಯ ಆಹಾರ ಸಾಮಗ್ರಿ ಪೂರೈಸಬೇಕು’ ಎಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಇಲ್ಲಿ ಬುಧವಾರ ಒತ್ತಾಯಿಸಿದರು.</p>.<p>‘ಚುನಾವಣೆಗೂ ಮುನ್ನ 10 ಕೆ.ಜಿ ಅಕ್ಕಿ ಕೊಡುವ ಭರವಸೆ ನೀಡಿದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಕೇವಲ 5 ಕೆ.ಜಿ ವಿತರಿಸಿತು. ಉಳಿದ 5 ಕೆ.ಜಿ ಅಕ್ಕಿ ಬದಲಾಗಿ ಹಣ ನೀಡಲಾಗುವುದು ಎಂದು ಹೇಳಿತ್ತು. ಈಗ ಆ ಹಣವೂ ಸಿಗುತ್ತಿಲ್ಲ. ಹಣ ಕೊಡುವುದು ಬಿಟ್ಟು ಬೇಳೆ, ಸಕ್ಕರೆ, ಅಡುಗೆ ಎಣ್ಣೆ ವಿತರಣೆ ಮಾಡಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>2017ರಲ್ಲಿ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರ ಇ-ಕೆವೈಸಿ ಮಾಡಿಸುವಂತೆ ಸರ್ಕಾರ ತಿಳಿಸಿತ್ತು. ಒಬ್ಬರಿಗೆ ₹5 ಕೊಡುತ್ತೇವೆ ಎಂದು ಹೇಳಿದ್ದರು. ಶೇ 95ರಷ್ಟು ಜನರ ಇ–ಕೆವೈಸಿ ಮುಕ್ತಾಯವಾಗಿದೆ. ಎಂಟು ವರ್ಷ ಕಳೆದರೂ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಈ ಹಣ ಬಂದಿಲ್ಲ. ₹18 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಸರ್ಕಾರ ಇತ್ತ ಗಮನ ಹರಿಸಬೇಕು ಎಂದು ಮನವಿ ಮಾಡಿದರು.</p>.<p>ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೀಡುವ ಕಮಿಷನ್ ಹಣ ಕೂಡ ಕಡಿಮೆ ಇದೆ. ಸದ್ಯ ಒಂದು ಕ್ವಿಂಟಲ್ ಅಕ್ಕಿಗೆ ₹124 ಕಮಿಷನ್ ಸಿಗುತ್ತಿದೆ. ಇದನ್ನು ₹150ಗೆ ಹೆಚ್ಚಿಸಿದ್ದು, ಇದುವರೆಗೆ ಅದು ಜಾರಿಯಾಗಿಲ್ಲ. ಕಮಿಷನ್ ಹಣ ₹200ಗೆ ಹೆಚ್ಚಿಸಬೇಕು. ಆಹಾರ ಪದಾರ್ಥ ಸಂಗ್ರಹಿಸುವ ಗೋದಾಮು, ನ್ಯಾಯಬೆಲೆ ಅಂಗಡಿಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆಗೆ ಹಣ ಮೀಸಲಿಟ್ಟಿದ್ದರೂ ಇನ್ನೂ ಬಿಡುಗಡೆಯಾಗಿಲ್ಲ. ಸರ್ಕಾರ ಶೀಘ್ರವೇ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯದರ್ಶಿ ಚನ್ನಕೇಶವೇಗೌಡ, ಉಪಾಧ್ಯಕ್ಷರಾದ ಕೆ.ಎಲ್.ರಾಮಚಂದ್ರ, ಕೆ.ಬಿ.ಉಮೇಶಚಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ನಟರಾಜ್, ಪದಾಧಿಕಾರಿಗಳಾದ ಬೀರಲಿಂಗಯ್ಯ, ಕೆ.ನಾಗರಾಜ್, ಪಿ.ಆರ್.ವಿ.ಪ್ರಸಾದ್, ಲಕ್ಷ್ಮಣ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ನೀಡುವ ಹಣ ಕಳೆದ ನಾಲ್ಕು ತಿಂಗಳಿನಿಂದ ಪಾವತಿಯಾಗಿಲ್ಲ. ಹಣದ ಬದಲಾಗಿ ಅಗತ್ಯ ಆಹಾರ ಸಾಮಗ್ರಿ ಪೂರೈಸಬೇಕು’ ಎಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಇಲ್ಲಿ ಬುಧವಾರ ಒತ್ತಾಯಿಸಿದರು.</p>.<p>‘ಚುನಾವಣೆಗೂ ಮುನ್ನ 10 ಕೆ.ಜಿ ಅಕ್ಕಿ ಕೊಡುವ ಭರವಸೆ ನೀಡಿದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಕೇವಲ 5 ಕೆ.ಜಿ ವಿತರಿಸಿತು. ಉಳಿದ 5 ಕೆ.ಜಿ ಅಕ್ಕಿ ಬದಲಾಗಿ ಹಣ ನೀಡಲಾಗುವುದು ಎಂದು ಹೇಳಿತ್ತು. ಈಗ ಆ ಹಣವೂ ಸಿಗುತ್ತಿಲ್ಲ. ಹಣ ಕೊಡುವುದು ಬಿಟ್ಟು ಬೇಳೆ, ಸಕ್ಕರೆ, ಅಡುಗೆ ಎಣ್ಣೆ ವಿತರಣೆ ಮಾಡಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>2017ರಲ್ಲಿ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರ ಇ-ಕೆವೈಸಿ ಮಾಡಿಸುವಂತೆ ಸರ್ಕಾರ ತಿಳಿಸಿತ್ತು. ಒಬ್ಬರಿಗೆ ₹5 ಕೊಡುತ್ತೇವೆ ಎಂದು ಹೇಳಿದ್ದರು. ಶೇ 95ರಷ್ಟು ಜನರ ಇ–ಕೆವೈಸಿ ಮುಕ್ತಾಯವಾಗಿದೆ. ಎಂಟು ವರ್ಷ ಕಳೆದರೂ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಈ ಹಣ ಬಂದಿಲ್ಲ. ₹18 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಸರ್ಕಾರ ಇತ್ತ ಗಮನ ಹರಿಸಬೇಕು ಎಂದು ಮನವಿ ಮಾಡಿದರು.</p>.<p>ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೀಡುವ ಕಮಿಷನ್ ಹಣ ಕೂಡ ಕಡಿಮೆ ಇದೆ. ಸದ್ಯ ಒಂದು ಕ್ವಿಂಟಲ್ ಅಕ್ಕಿಗೆ ₹124 ಕಮಿಷನ್ ಸಿಗುತ್ತಿದೆ. ಇದನ್ನು ₹150ಗೆ ಹೆಚ್ಚಿಸಿದ್ದು, ಇದುವರೆಗೆ ಅದು ಜಾರಿಯಾಗಿಲ್ಲ. ಕಮಿಷನ್ ಹಣ ₹200ಗೆ ಹೆಚ್ಚಿಸಬೇಕು. ಆಹಾರ ಪದಾರ್ಥ ಸಂಗ್ರಹಿಸುವ ಗೋದಾಮು, ನ್ಯಾಯಬೆಲೆ ಅಂಗಡಿಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆಗೆ ಹಣ ಮೀಸಲಿಟ್ಟಿದ್ದರೂ ಇನ್ನೂ ಬಿಡುಗಡೆಯಾಗಿಲ್ಲ. ಸರ್ಕಾರ ಶೀಘ್ರವೇ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯದರ್ಶಿ ಚನ್ನಕೇಶವೇಗೌಡ, ಉಪಾಧ್ಯಕ್ಷರಾದ ಕೆ.ಎಲ್.ರಾಮಚಂದ್ರ, ಕೆ.ಬಿ.ಉಮೇಶಚಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ನಟರಾಜ್, ಪದಾಧಿಕಾರಿಗಳಾದ ಬೀರಲಿಂಗಯ್ಯ, ಕೆ.ನಾಗರಾಜ್, ಪಿ.ಆರ್.ವಿ.ಪ್ರಸಾದ್, ಲಕ್ಷ್ಮಣ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>