<p><strong>ಪಾವಗಡ</strong>: ತಾಲ್ಲೂಕಿನ ಮುಗದಾಳಬೆಟ್ಟ ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸೋಮವಾರ ರೈತರು, ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ನಿಡಗಲ್ ಹೋಬಳಿ ಮುಗದಾಳ ಬೆಟ್ಟ ಗ್ರಾಮದ ಸರ್ವೆ ನಂ 166/1 ರಲ್ಲಿ ಮುಗದಾಳ ಬೆಟ್ಟ ಗೊಲ್ಲರಹಟ್ಟಿ ಯಲ್ಲಿ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಈ ಬಗ್ಗೆ ಜುಲೈ 31ರಂದು ಮಧುಗಿರಿ ನ್ಯಾಯಾಲಯದಲ್ಲಿ ಮುಗದಾಳಬೆಟ್ಟ ಗೊಲ್ಲರ ಹಟ್ಟಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ನ್ಯಾಯಾಲಯ ಆದೇಶ ನೀಡಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ತಿಳಿಸಿದರು.</p>.<p>ತಾಲ್ಲೂಕಿನ 4 ಹೋಬಳಿಯ ಅರ್ಹ ಫಲಾನುಭವಿಗಳು ಬಗರ್ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು ವರ್ಷ ಕಳೆದರೂ ಜಮೀನು ಮಂಜೂರು ಮಾಡಿಲ್ಲ. ಇದುವರೆಗೂ ಬಗರ್ ಹುಕುಂ ಸಮಿತಿ ಮಾಡದೇ, ಸಾರ್ವಜನಿಕರಿಗೆ ಸಣ್ಣ ಭೂ ಹಿಡುವಳಿದಾರರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.</p>.<p>ಈ ಕೂಡಲೇ ಶಾಸಕರು, ತಹಶೀಲ್ದಾರರು ಸಭೆ ಕರೆದು ಬಗರ್ ಹುಕುಂ ಅಡಿ ಅರ್ಜಿ ಹಾಕಿರುವ ಭೂರಹಿತ ಬಡವರಿಗೆ ಭೂಮಿ ಮಂಜೂರು ಮಾಡಿಕೊಡಬೇಕು. ಮುಗದಾಳಬೆಟ್ಟ ಗೊಲ್ಲರಹಟ್ಟಿಯಲ್ಲಿ ಮನೆಗಳ ನಿರ್ಮಾಣದ ಜೊತೆ ರಸ್ತೆ, ಚರಂಡಿ, ಅಂಗನವಾಡಿ ಇತರೆ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಶಿವು, ನರಸಪ್ಪ, ಚಿತ್ತಯ್ಯ, ರಾಮಾಂಜಿ, ಈರಣ್ಣ, ಲಕ್ಷ್ಮಿದೇವಮ್ಮ ಗುಡಿಪಲ್ಲಪ್ಪ, ದಾಸಣ್ಣ, ದುರ್ಗಪ್ಪ, ನರಸಪ್ಪ, ಹನುಮಂತರಾಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ತಾಲ್ಲೂಕಿನ ಮುಗದಾಳಬೆಟ್ಟ ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸೋಮವಾರ ರೈತರು, ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನ ನಿಡಗಲ್ ಹೋಬಳಿ ಮುಗದಾಳ ಬೆಟ್ಟ ಗ್ರಾಮದ ಸರ್ವೆ ನಂ 166/1 ರಲ್ಲಿ ಮುಗದಾಳ ಬೆಟ್ಟ ಗೊಲ್ಲರಹಟ್ಟಿ ಯಲ್ಲಿ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಈ ಬಗ್ಗೆ ಜುಲೈ 31ರಂದು ಮಧುಗಿರಿ ನ್ಯಾಯಾಲಯದಲ್ಲಿ ಮುಗದಾಳಬೆಟ್ಟ ಗೊಲ್ಲರ ಹಟ್ಟಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ನ್ಯಾಯಾಲಯ ಆದೇಶ ನೀಡಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಪೂಜಾರಪ್ಪ ತಿಳಿಸಿದರು.</p>.<p>ತಾಲ್ಲೂಕಿನ 4 ಹೋಬಳಿಯ ಅರ್ಹ ಫಲಾನುಭವಿಗಳು ಬಗರ್ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು ವರ್ಷ ಕಳೆದರೂ ಜಮೀನು ಮಂಜೂರು ಮಾಡಿಲ್ಲ. ಇದುವರೆಗೂ ಬಗರ್ ಹುಕುಂ ಸಮಿತಿ ಮಾಡದೇ, ಸಾರ್ವಜನಿಕರಿಗೆ ಸಣ್ಣ ಭೂ ಹಿಡುವಳಿದಾರರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.</p>.<p>ಈ ಕೂಡಲೇ ಶಾಸಕರು, ತಹಶೀಲ್ದಾರರು ಸಭೆ ಕರೆದು ಬಗರ್ ಹುಕುಂ ಅಡಿ ಅರ್ಜಿ ಹಾಕಿರುವ ಭೂರಹಿತ ಬಡವರಿಗೆ ಭೂಮಿ ಮಂಜೂರು ಮಾಡಿಕೊಡಬೇಕು. ಮುಗದಾಳಬೆಟ್ಟ ಗೊಲ್ಲರಹಟ್ಟಿಯಲ್ಲಿ ಮನೆಗಳ ನಿರ್ಮಾಣದ ಜೊತೆ ರಸ್ತೆ, ಚರಂಡಿ, ಅಂಗನವಾಡಿ ಇತರೆ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಶಿವು, ನರಸಪ್ಪ, ಚಿತ್ತಯ್ಯ, ರಾಮಾಂಜಿ, ಈರಣ್ಣ, ಲಕ್ಷ್ಮಿದೇವಮ್ಮ ಗುಡಿಪಲ್ಲಪ್ಪ, ದಾಸಣ್ಣ, ದುರ್ಗಪ್ಪ, ನರಸಪ್ಪ, ಹನುಮಂತರಾಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>