ತುಮಕೂರು ಜಿಲ್ಲೆಯಾದ್ಯಂತ ಉತ್ತಮ ಮಳೆ: ಬತ್ತಿದ್ದ ಸುವರ್ಣಮುಖಿಯಲ್ಲಿ ನೀರು

ತುಮಕೂರು: ಜಿಲ್ಲೆಯ ಬಹುತೇಕ ಭಾಗಗಳಿಗೆ ಮಂಗಳವಾರ ರಾತ್ರಿ ಉತ್ತಮ ಮಳೆ ಸುರಿದಿದೆ.
ಬತ್ತಿದ್ದ ಕೊರಟಗೆರೆ ತಾಲ್ಲೂಕಿನ ಸುವರ್ಣಮುಖಿ ನದಿಯಲ್ಲಿ ನೀರು ಹರಿಯುತ್ತಿದೆ. ಚೆಕ್ ಡ್ಯಾಂ, ಕೃಷಿ ಹೊಂಡಗಳಲ್ಲಿ ನೀರು ತುಂಬಿದೆ.
ಶಿರಾ ತಾಲ್ಲೂಕಿನ ವೀರಾಪುರದ ಚೆಕ್ ಡ್ಯಾಂ ತುಂಬಿದ್ದು ನಾದೂರು, ಹೆಂದೊರೆ ಕೆರೆಗಳಿಗೆ ನೀರು ಹರಿಯುತ್ತಿದೆ.
ತುಮಕೂರು ನಗರ, ತುಮಕೂರು ತಾಲ್ಲೂಕಿನ ಕೋರ, ಕೊರಟಗೆರೆ, ಗುಬ್ಬಿ ತಾಲ್ಲೂಕಿನಲ್ಲಿ ಹೆಚ್ಚಿನ ಮಳೆ ಸುರಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.