ತುಮಕೂರು: ಕೊರಟಗೆರೆ ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ (63) ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದು, ದೇವಾಲಯದ ಪೂಜಾ ಕೈಂಕರ್ಯಗಳು ಹಾಗೂ ದೇವರ ದರ್ಶನವನ್ನು ಭಾನುವಾರ ಮಧ್ಯಾಹ್ನ 1 ಗಂಟೆವರೆಗೆ ನಿರ್ಬಂಧಿಸಲಾಗಿದೆ.
ದೇವಾಲಯದ ಸಂಸ್ಥಾಪಕಿ ಕಮಲಮ್ಮ ಅವರ ಸಾಕು ಮಗನಾಗಿದ್ದ ಪ್ರಸನ್ನ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಭಾನುವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಪತ್ನಿ, ಪುತ್ರ, ಪುತ್ರಿ ಇದ್ದಾರೆ.