<p><strong>ಶಿರಾ:</strong> ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ತಮ್ಮ ಕೃತಿಗಳಲ್ಲಿ ಗ್ರಾಮೀಣ ಬದುಕನ್ನು ಸೋಜಿಗದ ರೀತಿ ಕಟ್ಟಿ ಕೊಟ್ಟಿದ್ದು, ಅವರ ಬದುಕು, ಬರಹ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಸ್ಮಾರಕ ನಿಧಿ, ಗೊರೂರ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಗೊರೂರರ ಬದುಕು ಬರಹ ಕುರಿತು ವಿಚಾರಣ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ದ ಪ್ರಮುಖ ಸಾಹಿತಿಗಳಲ್ಲಿ ಗೊರೂರು ಒಬ್ಬರು. ಗಂಭೀರ ಸಾಹಿತ್ಯ ರೂಪಿತವಾಗುತ್ತಿದ್ದ ಕಾಲಘಟ್ಟದಲ್ಲಿ ಗೊರೂರರು ತಮ್ಮ ಕಥೆ, ಕಾದಂಬರಿ ಮತ್ತು ಪ್ರಬಂಧಗಳಲ್ಲಿ ನವಿರಾದ ಹಾಸ್ಯವನ್ನು ಬಳಕೆಗೆ ತಂದ ಕನ್ನಡದ ಮೊದಲಿಗರು ಎಂದರು.</p>.<p>ತುಮಕೂರು ವಿ.ವಿ ಪ್ರಾಧ್ಯಾಪಕ ಸಿಬಂತಿ ಪದ್ಮನಾಭ ಮಾತನಾಡಿ, ಗೊರೂರರು ಹೇಮಾವತಿ, ಪುನರ್ಜನ್ಮ, ಮೆರವಣಿಗೆ, ಊರ್ವಶಿ, ರಾಜನರ್ತಕಿ, ಬೈಲಹಳ್ಳಿ ಸರ್ವೆ ಮೊದಲಾದ ಕೃತಿಗಳಲ್ಲಿ ಹಾಸ್ಯದೊಂದಿಗೆ ಬದುಕು ಬದಲಿಸಿಕೊಳ್ಳಲು ಆರೋಗ್ಯಕರ ಬದುಕು ಕಟ್ಟಿಕೊಟ್ಟಿದ್ದಾರೆ ಎಂದರು.</p>.<p>ಪ್ರಾಂಶುಪಾಲ ಚಂದ್ರಯ್ಯ ಬೆಳವಾಡಿ ಮಾತನಾಡಿ, ಗೊರೂರರು ಗಾಂಧಿ ಅವರ ಪ್ರಭಾವದಿಂದ 8ನೇ ತರಗತಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿ ಸ್ವಾತಂತ್ರ್ಯ ಚಳುವಳಿಗೆ ಧುಮುಕಿ, ಗಾಂಧಿ ಅನುಯಾಯಿಯಾಗಿ ಅಸಹಕಾರ ಚಳವಳಿಯಲ್ಲಿ ಭಾಗವಹಿಸಿ ಸೆರೆವಾಸ ಸಹ ಅನುಭವಿಸಿದ್ದರು. ಇವರ ಬರಹಗಳಲ್ಲಿ ಸಹ ಗಾಂಧಿ ವಿಚಾರಗಳು ಮೇಳೈಸಿವೆ ಎಂದರು.</p>.<p>ಕಸಾಪ ಅಧ್ಯಕ್ಷ ಬಿ.ಪಿ. ಪಾಂಡುರಂಗಯ್ಯ, ಕಮಲಾನರಸಿಂಹ, ಗೊರೂರರ ಪುತ್ರಿ ಕೆನಡಾ ನಿವಾಸಿ ವಾಸಂತಿ ಮೂರ್ತಿ, ಶ್ರೀನಿವಾಸ, ರೇಣುಕಮ್ಮ, ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮೂದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ತಮ್ಮ ಕೃತಿಗಳಲ್ಲಿ ಗ್ರಾಮೀಣ ಬದುಕನ್ನು ಸೋಜಿಗದ ರೀತಿ ಕಟ್ಟಿ ಕೊಟ್ಟಿದ್ದು, ಅವರ ಬದುಕು, ಬರಹ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಸ್ಮಾರಕ ನಿಧಿ, ಗೊರೂರ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಡೆದ ಗೊರೂರರ ಬದುಕು ಬರಹ ಕುರಿತು ವಿಚಾರಣ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ದ ಪ್ರಮುಖ ಸಾಹಿತಿಗಳಲ್ಲಿ ಗೊರೂರು ಒಬ್ಬರು. ಗಂಭೀರ ಸಾಹಿತ್ಯ ರೂಪಿತವಾಗುತ್ತಿದ್ದ ಕಾಲಘಟ್ಟದಲ್ಲಿ ಗೊರೂರರು ತಮ್ಮ ಕಥೆ, ಕಾದಂಬರಿ ಮತ್ತು ಪ್ರಬಂಧಗಳಲ್ಲಿ ನವಿರಾದ ಹಾಸ್ಯವನ್ನು ಬಳಕೆಗೆ ತಂದ ಕನ್ನಡದ ಮೊದಲಿಗರು ಎಂದರು.</p>.<p>ತುಮಕೂರು ವಿ.ವಿ ಪ್ರಾಧ್ಯಾಪಕ ಸಿಬಂತಿ ಪದ್ಮನಾಭ ಮಾತನಾಡಿ, ಗೊರೂರರು ಹೇಮಾವತಿ, ಪುನರ್ಜನ್ಮ, ಮೆರವಣಿಗೆ, ಊರ್ವಶಿ, ರಾಜನರ್ತಕಿ, ಬೈಲಹಳ್ಳಿ ಸರ್ವೆ ಮೊದಲಾದ ಕೃತಿಗಳಲ್ಲಿ ಹಾಸ್ಯದೊಂದಿಗೆ ಬದುಕು ಬದಲಿಸಿಕೊಳ್ಳಲು ಆರೋಗ್ಯಕರ ಬದುಕು ಕಟ್ಟಿಕೊಟ್ಟಿದ್ದಾರೆ ಎಂದರು.</p>.<p>ಪ್ರಾಂಶುಪಾಲ ಚಂದ್ರಯ್ಯ ಬೆಳವಾಡಿ ಮಾತನಾಡಿ, ಗೊರೂರರು ಗಾಂಧಿ ಅವರ ಪ್ರಭಾವದಿಂದ 8ನೇ ತರಗತಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿ ಸ್ವಾತಂತ್ರ್ಯ ಚಳುವಳಿಗೆ ಧುಮುಕಿ, ಗಾಂಧಿ ಅನುಯಾಯಿಯಾಗಿ ಅಸಹಕಾರ ಚಳವಳಿಯಲ್ಲಿ ಭಾಗವಹಿಸಿ ಸೆರೆವಾಸ ಸಹ ಅನುಭವಿಸಿದ್ದರು. ಇವರ ಬರಹಗಳಲ್ಲಿ ಸಹ ಗಾಂಧಿ ವಿಚಾರಗಳು ಮೇಳೈಸಿವೆ ಎಂದರು.</p>.<p>ಕಸಾಪ ಅಧ್ಯಕ್ಷ ಬಿ.ಪಿ. ಪಾಂಡುರಂಗಯ್ಯ, ಕಮಲಾನರಸಿಂಹ, ಗೊರೂರರ ಪುತ್ರಿ ಕೆನಡಾ ನಿವಾಸಿ ವಾಸಂತಿ ಮೂರ್ತಿ, ಶ್ರೀನಿವಾಸ, ರೇಣುಕಮ್ಮ, ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮೂದ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>