ಸಾರ್ವಜನಿಕ ದೂರಿನ ಅನ್ವಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅರಣ್ಯ ಭೂಮಿಯಲ್ಲಿ ರಸ್ತೆ ನಿರ್ಮಾಣ ಮಾಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಖಾಸಗಿಯವರು ಅರಣ್ಯ ಭೂಮಿ ಒತ್ತುವರಿ ಮಾಡಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ- ಕೆ.ಮಂಜುನಾಥ ತಹಶೀಲ್ದಾರ್
ಮರ ಕತ್ತರಿಸಿರುವುದು ದೃಢ
ಹೀರೆಬೆಟ್ಟದ ತಪ್ಪಲಿನಲ್ಲಿ ಅರಣ್ಯ ಭೂಮಿಗೆ ಸಂಬಂಧಿಸಿದ ಮರಗಳನ್ನು ಕತ್ತರಿಸಿರುವುದು ದೃಢಪಟ್ಟಿದೆ. ಅನುಮತಿ ಇಲ್ಲದೆ ಅರಣ್ಯ ಭೂಮಿ ಅತಿಕ್ರಮಣ ಮಾಡಿರುವುದು ಹಾಗೂ ಮರ ಕತ್ತರಿಸಿರುವುದರಿಂದ ಸಂಬಂಧಪಟ್ಟವರು ವಿರುದ್ಧ ಕಾನೂನು ಕ್ರಮ ಕೈಗೊಂಡು ಕೇಸು ದಾಖಲಿಸಲಾಗಿದೆ-ರವಿ ವಲಯ ಅರಣ್ಯಾಧಿಕಾರಿ