ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಂಗ್ರೆಸ್ ಮತ್ತು ಜೆಡಿಎಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೂ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಗೊಲ್ಲರಹಟ್ಟಿಗಳಲ್ಲಿ ಜನರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಜಯಚಂದ್ರ ಅವರು ಈ ಜನರಿಗೆ ಮನೆ ಕಟ್ಟಿಸಿಕೊಡಬಹುದಿತ್ತು. ಆದರೆ, ಸರ್ಕಾರದ ಯೋಜನೆಗಳನ್ನೇ ಜನರಿಗೆ ತಲುಪಿಸಿಲ್ಲ. ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯವನ್ನು ಈ ಕ್ಷೇತ್ರದಲ್ಲಿ ಯಾರೂ ಕಲ್ಪಿಸಿಲ್ಲ’ ಎಂದು ಆರೋಪಿಸಿದರು.