<p><strong>ತುಮಕೂರು:</strong> ಕೇಂದ್ರ ಸರ್ಕಾರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ₹14.50 ಲಕ್ಷ ವಂಚಿಸಿದ ಆರೋಪದ ಮೇರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಗಳಾದ ಆರ್.ಪ್ರಕಾಶ್ ಹಾಗೂ ಅವರ ಪತ್ನಿ ಮಧು ಅವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಧುಗಿರಿ ತಾಲ್ಲೂಕಿನ ಸಜ್ಜೆ ಹೊಸಹಳ್ಳಿ ನಿವಾಸಿ ಟಿ.ಎಚ್.ಪ್ರಕಾಶ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p>‘ಸ್ನೇಹಿತ ಕಾಂತರಾಜು ಮೂಲಕ ಆರ್.ಪ್ರಕಾಶ್, ಮಧು ಪರಿಚಯವಾಗಿತ್ತು. ನನ್ನ ಪತ್ನಿ, ಸಹೋದರ ಮತ್ತು ಇನ್ನಿಬ್ಬರು ಸ್ನೇಹಿತರಿಗೆ ಕೆಲಸ ಕೊಡಿಸುವಂತೆ ಕೇಳಿಕೊಂಡಿದ್ದೆ. ಒಂದು ಹುದ್ದೆಗೆ ₹8 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ಹಣವನ್ನು 2021ರ ಸೆ. 20ರಂದು ನಗರದ ಉಪನೋಂದಣಾಧಿಕಾರಿ ಕಚೇರಿ ಬಳಿ ಕೊಟ್ಟಿದ್ದೆ. ಹಣ ತೆಗೆದುಕೊಂಡು ಬೆಂಗಳೂರಿಗೆ ಹೋದವರು ಈವರೆಗೂ ಕೆಲಸ ಕೊಡಿಸಿಲ್ಲ’ ಎಂದು ಟಿ.ಎಚ್.ಪ್ರಕಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಆರ್.ಪ್ರಕಾಶ್ ನಿವಾಸಕ್ಕೆ ಹೋಗಿ ಹಣ ವಾಪಸ್ ಕೊಡುವಂತೆ ಕೇಳಿದಾಗ ‘ಕೆಲಸ ಕೊಡಿಸುವವರು ಈ ಬಾರಿ ಆಗುವುದಿಲ್ಲ ಎಂದು ಹೇಳಿದ್ದಾರೆ. ನಿಮ್ಮ ಹಣವನ್ನು 1 ತಿಂಗಳ ಒಳಗಡೆ ವಾಪಸ್ ನೀಡಲಾಗುವುದು’ ಎಂದು ತಿಳಿಸಿದ್ದರು. ನಂತರ ಈ ಹಣಕ್ಕೆ ಚೆಕ್ ನೀಡಿದ್ದರು. ಆದರೆ ಬ್ಯಾಂಕ್ ಖಾತೆಯಲ್ಲಿ ಹಣವೇ ಇರಲಿಲ್ಲ. ಈ ಬಗ್ಗೆ ಆರ್.ಪ್ರಕಾಶ್, ಮಧು ಅವರನ್ನು ಕೇಳಿದಾಗ ‘ಮನೆ ಹತ್ತಿರ ಬನ್ನಿ ನಿಮ್ಮ ಹಣ ನೀಡಲಾಗುವುದು’ ಎಂದಿದ್ದರು. ₹14.50 ಲಕ್ಷದಲ್ಲಿ ಈವರೆಗೆ ಕೇವಲ ₹2.50 ಲಕ್ಷ ಮಾತ್ರ ನಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೇಂದ್ರ ಸರ್ಕಾರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ₹14.50 ಲಕ್ಷ ವಂಚಿಸಿದ ಆರೋಪದ ಮೇರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಗಳಾದ ಆರ್.ಪ್ರಕಾಶ್ ಹಾಗೂ ಅವರ ಪತ್ನಿ ಮಧು ಅವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಧುಗಿರಿ ತಾಲ್ಲೂಕಿನ ಸಜ್ಜೆ ಹೊಸಹಳ್ಳಿ ನಿವಾಸಿ ಟಿ.ಎಚ್.ಪ್ರಕಾಶ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p>‘ಸ್ನೇಹಿತ ಕಾಂತರಾಜು ಮೂಲಕ ಆರ್.ಪ್ರಕಾಶ್, ಮಧು ಪರಿಚಯವಾಗಿತ್ತು. ನನ್ನ ಪತ್ನಿ, ಸಹೋದರ ಮತ್ತು ಇನ್ನಿಬ್ಬರು ಸ್ನೇಹಿತರಿಗೆ ಕೆಲಸ ಕೊಡಿಸುವಂತೆ ಕೇಳಿಕೊಂಡಿದ್ದೆ. ಒಂದು ಹುದ್ದೆಗೆ ₹8 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ಹಣವನ್ನು 2021ರ ಸೆ. 20ರಂದು ನಗರದ ಉಪನೋಂದಣಾಧಿಕಾರಿ ಕಚೇರಿ ಬಳಿ ಕೊಟ್ಟಿದ್ದೆ. ಹಣ ತೆಗೆದುಕೊಂಡು ಬೆಂಗಳೂರಿಗೆ ಹೋದವರು ಈವರೆಗೂ ಕೆಲಸ ಕೊಡಿಸಿಲ್ಲ’ ಎಂದು ಟಿ.ಎಚ್.ಪ್ರಕಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಆರ್.ಪ್ರಕಾಶ್ ನಿವಾಸಕ್ಕೆ ಹೋಗಿ ಹಣ ವಾಪಸ್ ಕೊಡುವಂತೆ ಕೇಳಿದಾಗ ‘ಕೆಲಸ ಕೊಡಿಸುವವರು ಈ ಬಾರಿ ಆಗುವುದಿಲ್ಲ ಎಂದು ಹೇಳಿದ್ದಾರೆ. ನಿಮ್ಮ ಹಣವನ್ನು 1 ತಿಂಗಳ ಒಳಗಡೆ ವಾಪಸ್ ನೀಡಲಾಗುವುದು’ ಎಂದು ತಿಳಿಸಿದ್ದರು. ನಂತರ ಈ ಹಣಕ್ಕೆ ಚೆಕ್ ನೀಡಿದ್ದರು. ಆದರೆ ಬ್ಯಾಂಕ್ ಖಾತೆಯಲ್ಲಿ ಹಣವೇ ಇರಲಿಲ್ಲ. ಈ ಬಗ್ಗೆ ಆರ್.ಪ್ರಕಾಶ್, ಮಧು ಅವರನ್ನು ಕೇಳಿದಾಗ ‘ಮನೆ ಹತ್ತಿರ ಬನ್ನಿ ನಿಮ್ಮ ಹಣ ನೀಡಲಾಗುವುದು’ ಎಂದಿದ್ದರು. ₹14.50 ಲಕ್ಷದಲ್ಲಿ ಈವರೆಗೆ ಕೇವಲ ₹2.50 ಲಕ್ಷ ಮಾತ್ರ ನಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>