<p><strong>ತುಮಕೂರು:</strong> ‘ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡರನ್ನು ನಾನು ಸೋಲಿಸಲಿಲ್ಲ. ‘ಗಂಗೆಯ ಶಾಪ’ದಿಂದ ಅವರು ಸೋತಿದ್ದಾರೆ’ ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದರು.</p>.<p>ಶನಿವಾರ ಹೇಮಾವತಿ ನಾಲಾ ವೀಕ್ಷಣೆ ಮಾಡುವ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ನೀರು ಕೊಡುವ ಯೋಜನೆ ರೂಪಿಸುವಾಗಲೂ ವಿರೋಧಿಸಿದ್ದರು. ನಂತರ ನೀರು ಬಿಡುವಾಗಲೂ ವಿರೋಧಿಸಿಕೊಂಡು ಬಂದಿದ್ದಾರೆ. ಹೀಗಾಗಿಯೇ ನಿಗದಿತ ಪ್ರಮಾಣದಲ್ಲಿ ನೀರು ತುಮಕೂರು ಜಿಲ್ಲೆಗೆ ಹರಿದಿಲ್ಲ’ ಎಂದು ಆರೋಪಿಸಿದರು.</p>.<p>‘ತುಮಕೂರು ಜಿಲ್ಲೆಗೆ ನೀರು ನಿಗದಿತ ಪ್ರಮಾಣದಲ್ಲಿ ದೊರಕದೇ ಇರುವುದಕ್ಕೆ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರ ರಾಜಕೀಯ ಹಿಡಿತವೂ ಕಾರಣವಾಗಿದೆ. ಹೇಮಾವತಿ ನೀರಾವರಿ ಸಲಹಾ ಸಮಿತಿಗೆ ಆ ಜಿಲ್ಲೆಯ ಉಸ್ತುವಾರಿ ಸಚಿವರೇ ಅಧ್ಯಕ್ಷರನ್ನಾಗಿ ಮಾಡುವುದರಿಂದ ಅವರು ತಮ್ಮ ಜಿಲ್ಲೆಯ ಹಿತಾಸಕ್ತಿಗೆ ಕೆಲಸ ಮಾಡುತ್ತಾರೆ. ಇದರಿಂದ ತುಮಕೂರು ಜಿಲ್ಲೆಗೆ ನಿಗದಿತ ಪ್ರಮಾಣದ ನೀರು ಲಭಿಸದೇ ನಿರಂತರ ಅನ್ಯಾಯವಾಗಿದೆ ಎಂದು ಆರೋಪಿಸಿದರು.</p>.<p>ಸಮಿತಿಗೆ ಆ ಜಿಲ್ಲೆಯ ಉಸ್ತುವಾರಿ ಸಚಿವರ ಬದಲು ಜಲಸಂಪನ್ಮೂಲ ಸಚಿವರೇ ಅಧ್ಯಕ್ಷರಾಗಬೇಕು ಎಂದು ಒತ್ತಾಯ ಮಾಡಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡರನ್ನು ನಾನು ಸೋಲಿಸಲಿಲ್ಲ. ‘ಗಂಗೆಯ ಶಾಪ’ದಿಂದ ಅವರು ಸೋತಿದ್ದಾರೆ’ ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದರು.</p>.<p>ಶನಿವಾರ ಹೇಮಾವತಿ ನಾಲಾ ವೀಕ್ಷಣೆ ಮಾಡುವ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ‘ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ನೀರು ಕೊಡುವ ಯೋಜನೆ ರೂಪಿಸುವಾಗಲೂ ವಿರೋಧಿಸಿದ್ದರು. ನಂತರ ನೀರು ಬಿಡುವಾಗಲೂ ವಿರೋಧಿಸಿಕೊಂಡು ಬಂದಿದ್ದಾರೆ. ಹೀಗಾಗಿಯೇ ನಿಗದಿತ ಪ್ರಮಾಣದಲ್ಲಿ ನೀರು ತುಮಕೂರು ಜಿಲ್ಲೆಗೆ ಹರಿದಿಲ್ಲ’ ಎಂದು ಆರೋಪಿಸಿದರು.</p>.<p>‘ತುಮಕೂರು ಜಿಲ್ಲೆಗೆ ನೀರು ನಿಗದಿತ ಪ್ರಮಾಣದಲ್ಲಿ ದೊರಕದೇ ಇರುವುದಕ್ಕೆ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರ ರಾಜಕೀಯ ಹಿಡಿತವೂ ಕಾರಣವಾಗಿದೆ. ಹೇಮಾವತಿ ನೀರಾವರಿ ಸಲಹಾ ಸಮಿತಿಗೆ ಆ ಜಿಲ್ಲೆಯ ಉಸ್ತುವಾರಿ ಸಚಿವರೇ ಅಧ್ಯಕ್ಷರನ್ನಾಗಿ ಮಾಡುವುದರಿಂದ ಅವರು ತಮ್ಮ ಜಿಲ್ಲೆಯ ಹಿತಾಸಕ್ತಿಗೆ ಕೆಲಸ ಮಾಡುತ್ತಾರೆ. ಇದರಿಂದ ತುಮಕೂರು ಜಿಲ್ಲೆಗೆ ನಿಗದಿತ ಪ್ರಮಾಣದ ನೀರು ಲಭಿಸದೇ ನಿರಂತರ ಅನ್ಯಾಯವಾಗಿದೆ ಎಂದು ಆರೋಪಿಸಿದರು.</p>.<p>ಸಮಿತಿಗೆ ಆ ಜಿಲ್ಲೆಯ ಉಸ್ತುವಾರಿ ಸಚಿವರ ಬದಲು ಜಲಸಂಪನ್ಮೂಲ ಸಚಿವರೇ ಅಧ್ಯಕ್ಷರಾಗಬೇಕು ಎಂದು ಒತ್ತಾಯ ಮಾಡಿದ್ದೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>