‘ವಿಧಾನಸಭಾ ಕಲಾಪದಲ್ಲಿ ಏನೇನು ಚರ್ಚೆ ಆಗುತ್ತದೆ ಎಂಬುದನ್ನು ರಾಜ್ಯದ ಜನ ಮುಕ್ತವಾಗಿ ನೋಡಲಿ ಎಂಬ ಕಾರಣಕ್ಕೆ ಮಾಧ್ಯಮದವರು ಕಲಾಪದ ದೃಶ್ಯಾವಳಿಗಳನ್ನು ಬಿತ್ತರಿಸುತ್ತಿದ್ದರು. ಆದರೆ, ಬಿಜೆಪಿ ಸರ್ಕಾರ ಕಲಾಪದ ಬಗ್ಗೆ ಸಾರ್ವಜನಿಕರಿಗೆ ತಿಳಿಯುವುದು ಬೇಡ ಎಂಬ ಕಾರಣಕ್ಕೋ ಏನೋ ಮಾಧ್ಯಮದವರ ಮೇಲೆ ನಿರ್ಬಂಧ ಹೇರಿದೆ. ಇದನ್ನು ನಾವು ಖಂಡಿಸುತ್ತೇವೆ. ವಿಧಾನಸಭೆಯಲ್ಲಿ ಆಗುವ ಚರ್ಚೆಗಳು ಸಾರ್ವಜನಿಕರಿಗೆ ಗೊತ್ತಾಗಬೇಕು. ಆಗ ಮಾತ್ರ ಸರ್ಕಾರದ ಆಗುಹೋಗುಗಳು ಹಾಗೂ ವೈಫಲ್ಯಗಳು ಜನರಿಗೆ ಗೊತ್ತಾಗಲಿವೆ. ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ’ ಎಂದರು.