<p><strong>ತುಮಕೂರು: </strong>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಾಂಗ್ರೆಸ್ ಜಿಲ್ಲಾ ಘಟಕ ತಡವಾಗಿಯಾದರೂ ನೆರವಿಗೆ ಬಂದಿದೆ. ಘಟಕದ ವತಿಯಿಂದ ರೂಪಿಸಿರುವ ಸಹಾಯವಾಣಿಗೆ ಶಾಸಕ ಜಿ.ಪರಮೇಶ್ವರ ಮಂಗಳವಾರ ಚಾಲನೆ ನೀಡಿದರು.</p>.<p>ಸಹಾಯವಾಣಿಗೆ ಬರುವ ಕರೆಗಳನ್ನು ಸ್ವೀಕರಿಸಲು ಇಬ್ಬರು ಕಾರ್ಯಕರ್ತರು ಇರುತ್ತಾರೆ. ನೆರವಿಗಾಗಿ ಯಾರಾದರೂ ಕರೆ ಮಾಡಿದರೆ, ಅದನ್ನು ಸಂಬಂಧಪಟ್ಟ ಅಧಿಕಾರಿಗಳು, ತಜ್ಞರ ಗಮನಕ್ಕೆ ತಂದು ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.</p>.<p>ಪಕ್ಷದಿಂದ ಈಗಾಗಲೇ ನಿತ್ಯ 500 ಜನರಿಗೆ ಉಚಿತವಾಗಿ ಊಟ ವಿತರಿಸಲಾಗುತ್ತಿದ್ದು, ಲಾಕ್ಡೌನ್ ಮುಗಿಯುವವರೆಗೂ ಮುಂದುವರಿಯಲಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಸರ್ಕಾರವನ್ನುದೂರುತ್ತಾ ಕೂರುವುದಿಲ್ಲ. ಅಗತ್ಯ ಸಹಕಾರವನ್ನು ಪಕ್ಷ ನೀಡಲಿದೆ ಎಂದರು.</p>.<p>ಕಾರ್ಮಿಕರ ಕೈ ಹಿಡಿಯಿರಿ: ಕಾರ್ಮಿಕ ಇಲಾಖೆಯಲ್ಲಿ ಸೆಸ್ ಮೂಲಕ ಸಂಗ್ರಹಿಸಿದ ಸುಮಾರು ₹7,000 ಕೋಟಿ ಹಣವಿದೆ. ಅದನ್ನು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಬೇಕು. ಆ ಹಣ ಬಳಕೆಗೆ ಬೇಕಾದ ಅನುಮತಿಯನ್ನು ರಾಜ್ಯ ಸರ್ಕಾರವು ಕೇಂದ್ರದಿಂದ ಆದಷ್ಟು ಬೇಗ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ರೈತರು ಬೆಳೆದ ಹಣ್ಣು, ತರಕಾರಿ, ಇತರ ಬೆಳೆಗಳು ಜಮೀನುಗಳಲ್ಲೇ ಹಾಳಾಗುತ್ತಿವೆ. ಅವು ಕೃಷಿ ಉತ್ಪನ್ನ ಮಾರುಕಟ್ಟೆ ತಲುಪಲು ಬೇಕಾದ ವ್ಯವಸ್ಥೆಯನ್ನು ಸರ್ಕಾರ ತಕ್ಷಣ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕಾಂಗ್ರೆಸ್ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ , ‘ಪಕ್ಷದಿಂದ ನಿತ್ಯ ಪೌರಕಾರ್ಮಿಕರು, ಬೆಸ್ಕಾಂ, ಕೂಲಿ ಕಾರ್ಮಿಕರಿಗೆ, ಅಸಹಾಯಕರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಲಾಕ್ಡೌನ್ನಿಂದ ಜೀವನೋಪಾಯಕ್ಕೆ ತೊಂದರೆ ಆಗಿದೆ. ಹಾಗಾಗಿ ಸಹಾಯಧನ ಘೋಷಿಸುವಂತೆ ಸರ್ಕಾರದ ಮೇಲೆ ಒತ್ತಾಯ ತರುವಂತೆ ಆಗ್ರಹಿಸಿ ಸವಿತಾ ಸಮಾಜ, ಮಡಿವಾಳ ಸಂಘ, ಆಟೊ ಮತ್ತು ಟ್ಯಾಕ್ಸಿ ಚಾಲಕರ ಸಂಘ, ರಂಗಭೂಮಿ ಕಲಾವಿದರ ಸಂಘದ ಪದಾಧಿಕಾರಿಗಳು ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಾಂಗ್ರೆಸ್ ವಕ್ತಾರ ಮುರಳಿಧರ ಹಾಲಪ್ಪ, ಮುಖಂಡರಾದ ಎಚ್.ಕೆಂಚಮಾರಯ್ಯ, ಜಿ.ಎಸ್.ಸೋಮಶೇಖರ್, ಕೊಂಡವಾಡಿ ಚಂದ್ರಶೇಖರ್, ರೇವಣ್ಣಸಿದ್ದಯ್ಯ, ತರುಣೇಶ್, ಬಿ.ಎಸ್.ದಿನೇಶ್, ವಾಲೆಚಂದ್ರು, ಮಾಜಿ ಮೇಯರ್ ಗೀತಾ ರುದ್ರೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಸುಜಾತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಾಂಗ್ರೆಸ್ ಜಿಲ್ಲಾ ಘಟಕ ತಡವಾಗಿಯಾದರೂ ನೆರವಿಗೆ ಬಂದಿದೆ. ಘಟಕದ ವತಿಯಿಂದ ರೂಪಿಸಿರುವ ಸಹಾಯವಾಣಿಗೆ ಶಾಸಕ ಜಿ.ಪರಮೇಶ್ವರ ಮಂಗಳವಾರ ಚಾಲನೆ ನೀಡಿದರು.</p>.<p>ಸಹಾಯವಾಣಿಗೆ ಬರುವ ಕರೆಗಳನ್ನು ಸ್ವೀಕರಿಸಲು ಇಬ್ಬರು ಕಾರ್ಯಕರ್ತರು ಇರುತ್ತಾರೆ. ನೆರವಿಗಾಗಿ ಯಾರಾದರೂ ಕರೆ ಮಾಡಿದರೆ, ಅದನ್ನು ಸಂಬಂಧಪಟ್ಟ ಅಧಿಕಾರಿಗಳು, ತಜ್ಞರ ಗಮನಕ್ಕೆ ತಂದು ಪರಿಹರಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.</p>.<p>ಪಕ್ಷದಿಂದ ಈಗಾಗಲೇ ನಿತ್ಯ 500 ಜನರಿಗೆ ಉಚಿತವಾಗಿ ಊಟ ವಿತರಿಸಲಾಗುತ್ತಿದ್ದು, ಲಾಕ್ಡೌನ್ ಮುಗಿಯುವವರೆಗೂ ಮುಂದುವರಿಯಲಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ಸರ್ಕಾರವನ್ನುದೂರುತ್ತಾ ಕೂರುವುದಿಲ್ಲ. ಅಗತ್ಯ ಸಹಕಾರವನ್ನು ಪಕ್ಷ ನೀಡಲಿದೆ ಎಂದರು.</p>.<p>ಕಾರ್ಮಿಕರ ಕೈ ಹಿಡಿಯಿರಿ: ಕಾರ್ಮಿಕ ಇಲಾಖೆಯಲ್ಲಿ ಸೆಸ್ ಮೂಲಕ ಸಂಗ್ರಹಿಸಿದ ಸುಮಾರು ₹7,000 ಕೋಟಿ ಹಣವಿದೆ. ಅದನ್ನು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ಬಳಸಬೇಕು. ಆ ಹಣ ಬಳಕೆಗೆ ಬೇಕಾದ ಅನುಮತಿಯನ್ನು ರಾಜ್ಯ ಸರ್ಕಾರವು ಕೇಂದ್ರದಿಂದ ಆದಷ್ಟು ಬೇಗ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ರೈತರು ಬೆಳೆದ ಹಣ್ಣು, ತರಕಾರಿ, ಇತರ ಬೆಳೆಗಳು ಜಮೀನುಗಳಲ್ಲೇ ಹಾಳಾಗುತ್ತಿವೆ. ಅವು ಕೃಷಿ ಉತ್ಪನ್ನ ಮಾರುಕಟ್ಟೆ ತಲುಪಲು ಬೇಕಾದ ವ್ಯವಸ್ಥೆಯನ್ನು ಸರ್ಕಾರ ತಕ್ಷಣ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕಾಂಗ್ರೆಸ್ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ , ‘ಪಕ್ಷದಿಂದ ನಿತ್ಯ ಪೌರಕಾರ್ಮಿಕರು, ಬೆಸ್ಕಾಂ, ಕೂಲಿ ಕಾರ್ಮಿಕರಿಗೆ, ಅಸಹಾಯಕರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಲಾಕ್ಡೌನ್ನಿಂದ ಜೀವನೋಪಾಯಕ್ಕೆ ತೊಂದರೆ ಆಗಿದೆ. ಹಾಗಾಗಿ ಸಹಾಯಧನ ಘೋಷಿಸುವಂತೆ ಸರ್ಕಾರದ ಮೇಲೆ ಒತ್ತಾಯ ತರುವಂತೆ ಆಗ್ರಹಿಸಿ ಸವಿತಾ ಸಮಾಜ, ಮಡಿವಾಳ ಸಂಘ, ಆಟೊ ಮತ್ತು ಟ್ಯಾಕ್ಸಿ ಚಾಲಕರ ಸಂಘ, ರಂಗಭೂಮಿ ಕಲಾವಿದರ ಸಂಘದ ಪದಾಧಿಕಾರಿಗಳು ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.</p>.<p>ಕಾಂಗ್ರೆಸ್ ವಕ್ತಾರ ಮುರಳಿಧರ ಹಾಲಪ್ಪ, ಮುಖಂಡರಾದ ಎಚ್.ಕೆಂಚಮಾರಯ್ಯ, ಜಿ.ಎಸ್.ಸೋಮಶೇಖರ್, ಕೊಂಡವಾಡಿ ಚಂದ್ರಶೇಖರ್, ರೇವಣ್ಣಸಿದ್ದಯ್ಯ, ತರುಣೇಶ್, ಬಿ.ಎಸ್.ದಿನೇಶ್, ವಾಲೆಚಂದ್ರು, ಮಾಜಿ ಮೇಯರ್ ಗೀತಾ ರುದ್ರೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಸುಜಾತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>