<p><strong>ತುಮಕೂರು:</strong> ತಾಲ್ಲೂಕಿನ ದೇವರಾಯನದುರ್ಗದಲ್ಲಿ ಮಂಗಳವಾರ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.</p>.<p>ಗ್ರಹಣದ ಕಾರಣಕ್ಕೆ ಧಾರ್ಮಿಕ ಕೈಂಕರ್ಯಗಳನ್ನು ಬೆಳಿಗ್ಗೆ 11 ಗಂಟೆಯ ಒಳಗೆ ಪೂರ್ಣಗೊಳಿಸಲಾಯಿತು. 11ರ ನಂತರ ತೇರನ್ನು ಎಳೆಯಲಾಯಿತು. ಬೆಳಗಿನ ಜಾವದಿಂದ ವಿಶೇಷ ಪೂಜೆ, ಅಭಿಷೇಕ ಮಾಡಲಾಯಿತು. ಹಲವು ಬಗೆಯ ಹೂವುಗಳಿಂದ ರಥ, ದೇವಾಲಯವನ್ನು ಅಲಂಕರಿಸಲಾಗಿತ್ತು.</p>.<p>ರಥ ಮುಂದಕ್ಕೆ ಸಾಗುತ್ತಿದ್ದಂತೆ ದೇಗುಲದ ಬಳಿ ನೆರೆದಿದ್ದ ಭಕ್ತರು ಹೂ, ಬಾಳೆಹಣ್ಣು, ದವನ ಎಸೆದು ಹರಕೆ ತೀರಿಸಿದರು. ಭಕ್ತರಿಗೆ ಪಾನಕ, ಮಜ್ಜಿಗೆ, ದಾಸೋಹದ ವ್ಯವಸ್ಥೆ ಮಾಡಲಾಗಿತ್ತು.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರ ಸಂಖ್ಯೆ ಕಡಿಮೆ ಇತ್ತು. ಗ್ರಹಣ ಇರುವುದರಿಂದ ತುಂಬಾ ಜನ ದೇವಸ್ಥಾನದ ಕಡೆಗೆ ಹೆಜ್ಜೆ ಹಾಕಲಿಲ್ಲ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳೂ ಆರಂಭವಾಗಿದ್ದು, ಹಲವರು ರಥೋತ್ಸವದಿಂದ ದೂರ ಉಳಿದಿದ್ದರು.</p>.<p>ಶಾಸಕ ಬಿ.ಸುರೇಶ್ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಡಿ.ಸಿ.ಗೌರಿಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಲ್.ಪುರುಷೋತ್ತಮ್, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ ಇತರರು ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ತಾಲ್ಲೂಕಿನ ದೇವರಾಯನದುರ್ಗದಲ್ಲಿ ಮಂಗಳವಾರ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.</p>.<p>ಗ್ರಹಣದ ಕಾರಣಕ್ಕೆ ಧಾರ್ಮಿಕ ಕೈಂಕರ್ಯಗಳನ್ನು ಬೆಳಿಗ್ಗೆ 11 ಗಂಟೆಯ ಒಳಗೆ ಪೂರ್ಣಗೊಳಿಸಲಾಯಿತು. 11ರ ನಂತರ ತೇರನ್ನು ಎಳೆಯಲಾಯಿತು. ಬೆಳಗಿನ ಜಾವದಿಂದ ವಿಶೇಷ ಪೂಜೆ, ಅಭಿಷೇಕ ಮಾಡಲಾಯಿತು. ಹಲವು ಬಗೆಯ ಹೂವುಗಳಿಂದ ರಥ, ದೇವಾಲಯವನ್ನು ಅಲಂಕರಿಸಲಾಗಿತ್ತು.</p>.<p>ರಥ ಮುಂದಕ್ಕೆ ಸಾಗುತ್ತಿದ್ದಂತೆ ದೇಗುಲದ ಬಳಿ ನೆರೆದಿದ್ದ ಭಕ್ತರು ಹೂ, ಬಾಳೆಹಣ್ಣು, ದವನ ಎಸೆದು ಹರಕೆ ತೀರಿಸಿದರು. ಭಕ್ತರಿಗೆ ಪಾನಕ, ಮಜ್ಜಿಗೆ, ದಾಸೋಹದ ವ್ಯವಸ್ಥೆ ಮಾಡಲಾಗಿತ್ತು.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರ ಸಂಖ್ಯೆ ಕಡಿಮೆ ಇತ್ತು. ಗ್ರಹಣ ಇರುವುದರಿಂದ ತುಂಬಾ ಜನ ದೇವಸ್ಥಾನದ ಕಡೆಗೆ ಹೆಜ್ಜೆ ಹಾಕಲಿಲ್ಲ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳೂ ಆರಂಭವಾಗಿದ್ದು, ಹಲವರು ರಥೋತ್ಸವದಿಂದ ದೂರ ಉಳಿದಿದ್ದರು.</p>.<p>ಶಾಸಕ ಬಿ.ಸುರೇಶ್ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಡಿ.ಸಿ.ಗೌರಿಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಲ್.ಪುರುಷೋತ್ತಮ್, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ ಇತರರು ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>