<p><strong>ಶಿರಾ:</strong> ಕೇಂದ್ರ ಸಚಿವರಾದ ನಂತರ ಪ್ರಥಮ ಬಾರಿಗೆ ಸೋಮವಾರ ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.</p>.<p>ರಾಷ್ಟ್ರೀಯ ಹೆದ್ದಾರಿ 48ರ ಕರೇಜವನಹಳ್ಳಿ ಟೋಲ್ಗೇಟ್ ಬಳಿ ಕಾರ್ಯಕರ್ತರು ಸ್ವಾಗತಿಸಿದರು. ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕಿ, ಪಟಾಕಿ ಸಿಡಿಸಿ ಸ್ವಾಗತಿಸಲಾಯಿತು.</p>.<p>ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ಕಾರ್ಯಕರ್ತರ ಪರಿಶ್ರಮದಿಂದ ಇಂದು ಕೇಂದ್ರ ಸಚಿವನಾಗಿದ್ದೇನೆ. ನನ್ನ ಪರಿಶ್ರಮದ ಪ್ರತಿಫಲ ಎಲ್ಲಾ ರಾಜ್ಯದ ಜನತೆಗೆ ಸೇರುತ್ತದೆ. ನಿಮ್ಮ ಸಹಕಾರದಿಂದ ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಸಂತಸದ ವಿಷಯವಾಗಿದೆ’ ಎಂದರು.</p>.<p>‘ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವನಾದರೂ ರೈತರನ್ನು ಮರೆಯುವುದಿಲ್ಲ. ಅವರ ಪರವಾಗಿ ಕೆಲಸ ಮಾಡುತ್ತೇನೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರೆಯುವಂತೆ ಮಾಡಲು ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ’ ಎಂದರು.</p>.<p>ಮಾಜಿ ಸಚಿವ ಸೊಗಡು ಶಿವಣ್ಣ, ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಮುಡಿಮಡು ರಂಗಶ್ವಾಮಯ್ಯ, ಕಲ್ಲೆರೆ ರವಿಕುಮಾರ್, ಸತ್ಯಪ್ರಕಾಶ್, ಮುಡಿಮಡು ಮಂಜುನಾಥ್ ಇದ್ದರು.</p>.<p>ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹೇಶ್ವರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿ, ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಕೇಂದ್ರ ಸಚಿವರಾದ ನಂತರ ಪ್ರಥಮ ಬಾರಿಗೆ ಸೋಮವಾರ ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.</p>.<p>ರಾಷ್ಟ್ರೀಯ ಹೆದ್ದಾರಿ 48ರ ಕರೇಜವನಹಳ್ಳಿ ಟೋಲ್ಗೇಟ್ ಬಳಿ ಕಾರ್ಯಕರ್ತರು ಸ್ವಾಗತಿಸಿದರು. ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕಿ, ಪಟಾಕಿ ಸಿಡಿಸಿ ಸ್ವಾಗತಿಸಲಾಯಿತು.</p>.<p>ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ಕಾರ್ಯಕರ್ತರ ಪರಿಶ್ರಮದಿಂದ ಇಂದು ಕೇಂದ್ರ ಸಚಿವನಾಗಿದ್ದೇನೆ. ನನ್ನ ಪರಿಶ್ರಮದ ಪ್ರತಿಫಲ ಎಲ್ಲಾ ರಾಜ್ಯದ ಜನತೆಗೆ ಸೇರುತ್ತದೆ. ನಿಮ್ಮ ಸಹಕಾರದಿಂದ ಚಿತ್ರದುರ್ಗ ಮತ್ತು ತುಮಕೂರಿನಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಸಂತಸದ ವಿಷಯವಾಗಿದೆ’ ಎಂದರು.</p>.<p>‘ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವನಾದರೂ ರೈತರನ್ನು ಮರೆಯುವುದಿಲ್ಲ. ಅವರ ಪರವಾಗಿ ಕೆಲಸ ಮಾಡುತ್ತೇನೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರೆಯುವಂತೆ ಮಾಡಲು ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ’ ಎಂದರು.</p>.<p>ಮಾಜಿ ಸಚಿವ ಸೊಗಡು ಶಿವಣ್ಣ, ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಮುಡಿಮಡು ರಂಗಶ್ವಾಮಯ್ಯ, ಕಲ್ಲೆರೆ ರವಿಕುಮಾರ್, ಸತ್ಯಪ್ರಕಾಶ್, ಮುಡಿಮಡು ಮಂಜುನಾಥ್ ಇದ್ದರು.</p>.<p>ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹೇಶ್ವರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿ, ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>