<p><strong>ತುಮಕೂರು</strong>: ತಾಲ್ಲೂಕಿನ ನಾಗವಲ್ಲಿ ಕೆಪಿಎಸ್ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಮೀಸಲಿಟ್ಟ ಹಣವನ್ನು ಸರ್ಕಾರ ವಾಪಸ್ ಪಡೆದಿದೆ. ಇದು ವಚನ ದ್ರೋಹ, ಕನ್ನಡ ವಿರೋಧಿ ಧೋರಣೆ ಎಂದು ಶಾಸಕ ಬಿ.ಸುರೇಶ್ಗೌಡ ಟೀಕಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹1.21 ಕೋಟಿ ವೆಚ್ಚದ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಇದುವರೆಗೆ ಬಿಡಿಗಾಸು ಕೊಟ್ಟಿಲ್ಲ. ಶಿಕ್ಷಣ ಇಲಾಖೆ ಈ ಅನುದಾನ ವಾಪಸ್ ತೆಗೆದುಕೊಂಡಿದೆ. ಶಾಲೆಯಲ್ಲಿ 1,113 ಮಕ್ಕಳು ಓದುತ್ತಿದ್ದಾರೆ. ಕೊಠಡಿ, ಶೌಚಾಲಯ ಮುಂತಾದ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು. ಈಗ ಮಕ್ಕಳು ಬೀದಿಯಲ್ಲಿ ಓದುವಂತಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಸರ್ಕಾರ ದಿವಾಳಿಯಾಗಿದೆ ಎನ್ನುವುದಕ್ಕೆ ಕಾಮಗಾರಿ ಸೂಕ್ತ ಉದಾಹರಣೆ. ಬಿಟ್ಟಿ ಭಾಗ್ಯಗಳನ್ನು ನಿಲ್ಲಿಸಿ ಅಭಿವೃದ್ಧಿಗಾಗಿ ಹಣ ಮೀಸಲಿಡಬೇಕು. ಶಾಸಕರು ಅನುದಾನಕ್ಕೆ ಮನವಿ ಮಾಡಿದರೆ ಅವರಿಗೆ ಉಪಮುಖ್ಯಮಂತ್ರಿ ಶೋಕಾಸ್ ನೋಟಿಸ್ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಇದು ಪ್ರಜಾಪ್ರಭುತ್ವವೇ? ಅಥವಾ ಸರ್ವಾಧಿಕಾರಿ ಆಡಳಿತವೇ? ಎಂದು ಪ್ರಶ್ನಿಸಿದ್ದಾರೆ.</p>.<p>ಡಿ. 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹1,200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ₹1.21 ಕೋಟಿ ನೀಡದ ಸರ್ಕಾರ ₹1,200 ಕೋಟಿ ಬಿಡುಗಡೆ ಮಾಡುತ್ತದೆಯೇ? ಇದು ಜನರನ್ನು ವಂಚಿಸುವ ಕಾರ್ಯಕ್ರಮ. ಎನ್ಡಿಎ ಶಾಸಕರು ಸದರಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ. ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತಾಲ್ಲೂಕಿನ ನಾಗವಲ್ಲಿ ಕೆಪಿಎಸ್ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಮೀಸಲಿಟ್ಟ ಹಣವನ್ನು ಸರ್ಕಾರ ವಾಪಸ್ ಪಡೆದಿದೆ. ಇದು ವಚನ ದ್ರೋಹ, ಕನ್ನಡ ವಿರೋಧಿ ಧೋರಣೆ ಎಂದು ಶಾಸಕ ಬಿ.ಸುರೇಶ್ಗೌಡ ಟೀಕಿಸಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹1.21 ಕೋಟಿ ವೆಚ್ಚದ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಇದುವರೆಗೆ ಬಿಡಿಗಾಸು ಕೊಟ್ಟಿಲ್ಲ. ಶಿಕ್ಷಣ ಇಲಾಖೆ ಈ ಅನುದಾನ ವಾಪಸ್ ತೆಗೆದುಕೊಂಡಿದೆ. ಶಾಲೆಯಲ್ಲಿ 1,113 ಮಕ್ಕಳು ಓದುತ್ತಿದ್ದಾರೆ. ಕೊಠಡಿ, ಶೌಚಾಲಯ ಮುಂತಾದ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿತ್ತು. ಈಗ ಮಕ್ಕಳು ಬೀದಿಯಲ್ಲಿ ಓದುವಂತಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಸರ್ಕಾರ ದಿವಾಳಿಯಾಗಿದೆ ಎನ್ನುವುದಕ್ಕೆ ಕಾಮಗಾರಿ ಸೂಕ್ತ ಉದಾಹರಣೆ. ಬಿಟ್ಟಿ ಭಾಗ್ಯಗಳನ್ನು ನಿಲ್ಲಿಸಿ ಅಭಿವೃದ್ಧಿಗಾಗಿ ಹಣ ಮೀಸಲಿಡಬೇಕು. ಶಾಸಕರು ಅನುದಾನಕ್ಕೆ ಮನವಿ ಮಾಡಿದರೆ ಅವರಿಗೆ ಉಪಮುಖ್ಯಮಂತ್ರಿ ಶೋಕಾಸ್ ನೋಟಿಸ್ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಇದು ಪ್ರಜಾಪ್ರಭುತ್ವವೇ? ಅಥವಾ ಸರ್ವಾಧಿಕಾರಿ ಆಡಳಿತವೇ? ಎಂದು ಪ್ರಶ್ನಿಸಿದ್ದಾರೆ.</p>.<p>ಡಿ. 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹1,200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ₹1.21 ಕೋಟಿ ನೀಡದ ಸರ್ಕಾರ ₹1,200 ಕೋಟಿ ಬಿಡುಗಡೆ ಮಾಡುತ್ತದೆಯೇ? ಇದು ಜನರನ್ನು ವಂಚಿಸುವ ಕಾರ್ಯಕ್ರಮ. ಎನ್ಡಿಎ ಶಾಸಕರು ಸದರಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ. ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>