<p><strong>ತುರುವೇಕೆರೆ:</strong> ತಾಲ್ಲೂಕಿನ 40ಕ್ಕೂ ಹೆಚ್ಚು ಶಾಲೆಗಳ 87 ಕೊಠಡಿ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಂದಿದೆ ಎಂದು ಶಾಸಕ ಮಸಾಲ ಜಯರಾಂ ಹೇಳಿದರು.</p>.<p>ಪಟ್ಟಣದ ಜೆ.ಪಿ. ಕಾನ್ವೆಂಟ್ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವೈದ್ಯರು, ವಿಜ್ಞಾನಿಗಳು, ರಾಜಕಾರಣಿಗಳು, ತಂತ್ರಜ್ಞರು, ಕ್ರೀಡಾಪಟುಗಳು, ವಕೀಲರು ಹೀಗೆ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಗಮನಾರ್ಹ ಎಂದರು.</p>.<p>ತುಮುಲ್ ಅಧ್ಯಕ್ಷ ಸಿ.ವಿ.ಮಹಾಲಿಂಗಯ್ಯ ಮಾತನಾಡಿ, ‘ಕೋವಿಡ್-19 ಸೃಷ್ಟಿಸಿದ ಬಿಕ್ಕಟ್ಟು ಶೈಕ್ಷಣಿಕ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಆನ್ಲೈನ್ ಶಿಕ್ಷಣ ವ್ಯವಸ್ಥೆ ಮಕ್ಕಳ ಕಲಿಕೆಗೆ ಸಮರ್ಪಕವಾಗಿಲ್ಲ. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದರು.</p>.<p>ವಿವಿಧ ಕ್ಷೇತ್ರಗಳ ಸಾಧಕ ಶಿಕ್ಷಕರಾದ ಎ.ಆರ್.ಲತಾ, ಗಂಗಮ್ಮ ಮತ್ತು ಮಹಾಲಿಂಗಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ಕ್ಷೇತ್ರ ಶಿಕ್ಷಣಾದಿಕಾರಿ ಸಿ.ರಂಗಧಾಮಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಸದಸ್ಯ ನಂಜೇಗೌಡ, ಪ.ಪಂ ಸದಸ್ಯ ಚಿದಾನಂದ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಂರಾಜುಮುನಿಯೂರು, ಇ.ಒ. ಜಯಕುಮಾರ್, ಬಿಆರ್.ಸಿ. ವಸಂತ್ಕುಮಾರ್, ಬೋರಪ್ಪ, ಪರಮೇಶ್, ಮುಖಂಡ ಕೊಂಡಜ್ಜಿವಿಶ್ವನಾಥ್, ರಮೇಶ್ಗೌಡ, ಸುರೇಶ್ ಪಾಲೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕಿನ 40ಕ್ಕೂ ಹೆಚ್ಚು ಶಾಲೆಗಳ 87 ಕೊಠಡಿ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಂದಿದೆ ಎಂದು ಶಾಸಕ ಮಸಾಲ ಜಯರಾಂ ಹೇಳಿದರು.</p>.<p>ಪಟ್ಟಣದ ಜೆ.ಪಿ. ಕಾನ್ವೆಂಟ್ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವೈದ್ಯರು, ವಿಜ್ಞಾನಿಗಳು, ರಾಜಕಾರಣಿಗಳು, ತಂತ್ರಜ್ಞರು, ಕ್ರೀಡಾಪಟುಗಳು, ವಕೀಲರು ಹೀಗೆ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಗಮನಾರ್ಹ ಎಂದರು.</p>.<p>ತುಮುಲ್ ಅಧ್ಯಕ್ಷ ಸಿ.ವಿ.ಮಹಾಲಿಂಗಯ್ಯ ಮಾತನಾಡಿ, ‘ಕೋವಿಡ್-19 ಸೃಷ್ಟಿಸಿದ ಬಿಕ್ಕಟ್ಟು ಶೈಕ್ಷಣಿಕ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಆನ್ಲೈನ್ ಶಿಕ್ಷಣ ವ್ಯವಸ್ಥೆ ಮಕ್ಕಳ ಕಲಿಕೆಗೆ ಸಮರ್ಪಕವಾಗಿಲ್ಲ. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದರು.</p>.<p>ವಿವಿಧ ಕ್ಷೇತ್ರಗಳ ಸಾಧಕ ಶಿಕ್ಷಕರಾದ ಎ.ಆರ್.ಲತಾ, ಗಂಗಮ್ಮ ಮತ್ತು ಮಹಾಲಿಂಗಪ್ಪ ಅವರನ್ನು ಸನ್ಮಾನಿಸಲಾಯಿತು.</p>.<p>ಕ್ಷೇತ್ರ ಶಿಕ್ಷಣಾದಿಕಾರಿ ಸಿ.ರಂಗಧಾಮಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಸದಸ್ಯ ನಂಜೇಗೌಡ, ಪ.ಪಂ ಸದಸ್ಯ ಚಿದಾನಂದ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಂರಾಜುಮುನಿಯೂರು, ಇ.ಒ. ಜಯಕುಮಾರ್, ಬಿಆರ್.ಸಿ. ವಸಂತ್ಕುಮಾರ್, ಬೋರಪ್ಪ, ಪರಮೇಶ್, ಮುಖಂಡ ಕೊಂಡಜ್ಜಿವಿಶ್ವನಾಥ್, ರಮೇಶ್ಗೌಡ, ಸುರೇಶ್ ಪಾಲೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>