<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಸೋಮವಾರ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಇತರ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶಾಸಕ ಸಿ.ಬಿ. ಸುರೇಶ್ ಬಾಬು ಉದ್ಟಾಟಿಸಿದರು.</p>.<p>ನಂತರ ಮಾತನಾಡಿದ ಶಾಸಕ, ಕೇವಲ ಪಠ್ಯಕ್ಕೆ ಸೀಮಿತವಾಗಿರದೆ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ. ಕಳೆದ ವರ್ಷ ಸರ್ಕಾರದಿಂದ ಯಾವುದೇ ಅನುದಾನ ಬಾರದ ಕಾರಣ ಕಾಲೇಜಿನ ಕಾಂಪೌಂಡ್, ಸೈಕಲ್ ಸ್ಟಾಂಡ್, ಕಂಪ್ಯೂಟರ್ಗಳನ್ನು ನೀಡಿಲ್ಲ. ಅದರೆ ಈ ವರ್ಷ ನೀಡಲಾಗುವುದು ಎಂದರು.</p>.<p>ಕಾರ್ಯಕ್ರಮದಲ್ಲಿ ಜಾನಪದ ವಿವಿ ಸಿಂಡಿಕೇಟ್ ಸದಸ್ಯ, ವೇದ ಸಿನಿಮಾದ ಹಿನ್ನೆಲೆ ಗಾಯಕ ಮೋಹನ್ಕುಮಾರ್ ಎನ್. ಜುಂಜಪ್ಪನ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.</p>.<p>ಪ್ರಾಂಶುಪಾಲೆ ಜ್ಯೋತಿ ಎಂ.ಜಿ., ಪ್ರಸನ್ನಕುಮಾರ್, ದೈಹಿಕ ಶಿಕ್ಷಕರಾದ ಶೈಲೇಂದ್ರ ಕುಮಾರ್, ಪ್ರಾಧ್ಯಾಪಕರು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಸೋಮವಾರ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಇತರ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶಾಸಕ ಸಿ.ಬಿ. ಸುರೇಶ್ ಬಾಬು ಉದ್ಟಾಟಿಸಿದರು.</p>.<p>ನಂತರ ಮಾತನಾಡಿದ ಶಾಸಕ, ಕೇವಲ ಪಠ್ಯಕ್ಕೆ ಸೀಮಿತವಾಗಿರದೆ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ. ಕಳೆದ ವರ್ಷ ಸರ್ಕಾರದಿಂದ ಯಾವುದೇ ಅನುದಾನ ಬಾರದ ಕಾರಣ ಕಾಲೇಜಿನ ಕಾಂಪೌಂಡ್, ಸೈಕಲ್ ಸ್ಟಾಂಡ್, ಕಂಪ್ಯೂಟರ್ಗಳನ್ನು ನೀಡಿಲ್ಲ. ಅದರೆ ಈ ವರ್ಷ ನೀಡಲಾಗುವುದು ಎಂದರು.</p>.<p>ಕಾರ್ಯಕ್ರಮದಲ್ಲಿ ಜಾನಪದ ವಿವಿ ಸಿಂಡಿಕೇಟ್ ಸದಸ್ಯ, ವೇದ ಸಿನಿಮಾದ ಹಿನ್ನೆಲೆ ಗಾಯಕ ಮೋಹನ್ಕುಮಾರ್ ಎನ್. ಜುಂಜಪ್ಪನ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.</p>.<p>ಪ್ರಾಂಶುಪಾಲೆ ಜ್ಯೋತಿ ಎಂ.ಜಿ., ಪ್ರಸನ್ನಕುಮಾರ್, ದೈಹಿಕ ಶಿಕ್ಷಕರಾದ ಶೈಲೇಂದ್ರ ಕುಮಾರ್, ಪ್ರಾಧ್ಯಾಪಕರು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>