ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ‘ಹೊಟ್ಟೆ ತುಂಬಿಸಿಕೊಳ್ಳಲು ಆಹಾರ ಇದೆ. ಆದರೆ, ಪೌಷ್ಟಿಕಾಂಶ ಯುಕ್ತ ಆಹಾರ ಸಿಗುತ್ತಿಲ್ಲ. ಎಲ್ಲರೂ ಸ್ಥಳೀಯ ಆಹಾರ ಪದಾರ್ಥಗಳಿಗೆ ಪ್ರೋತ್ಸಾಹ ನೀಡಿದರೆ ರೈತರಿಗೂ ಅನುಕೂಲವಾಗಲಿದೆ. ಆರೋಗ್ಯಕರ ಸಮಾಜಕ್ಕೆ ಸ್ಥಳೀಯ, ಪೂರ್ವಜರು ಅನುಸರಿಸಿದ ಆಹಾರ ಪದ್ಧತಿಯನ್ನು ನಾವು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.