<p>ತುಮಕೂರು: ‘ಪ್ರತಿಯೊಬ್ಬ ರೈತನೂ ನಾಯಕನಾಗಬೇಕು ಎಂದು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಬಯಸಿದ್ದರು. ಹಸಿರು ಶಾಲನ್ನು ರೈತರ ಕಿರೀಟವಾಗಿ, ಆತ್ಮಗೌರವದ ಸಂಕೇತವಾಗಿ ಪರಿಗಣಿಸಿದ್ದರು’ ಎಂದು ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಅಣ್ಣಪ್ಪ ಮಳಿಮಠ ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾಲಯ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅಧ್ಯಯನ ಪೀಠ, ಶೇಷಾದ್ರಿಪುರಂ ಕಾಲೇಜು ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಪ್ರೊ.ಎಂ.ಡಿ.ನಂಜುಂಡಸ್ವಾಮಿ ವಿಚಾರಧಾರೆ– ಭಾರತದ ರೈತ ಚಳವಳಿ’ ಕುರಿತು ಉಪನ್ಯಾಸ ನೀಡಿದರು.</p>.<p>ನಂಜುಂಡಸ್ವಾಮಿ ಏಕಾಂಗಿಯಾಗಿ ಹೋರಾಟ ಆರಂಭಿಸಿ, ಅದನ್ನು ಬೃಹತ್ ಚಳವಳಿಯನ್ನಾಗಿ ರೂಪಿಸಿ ರೈತ ಸಂಘ ಕಟ್ಟಿ, ಬೆಳೆಸಿದರು. ಜಾತ್ಯತೀತ ತಳಹದಿಯ ಮೇಲೆ ರೈತ ಚಳವಳಿ ಸಂಘಟಿಸಿದ್ದರು. ನರಗುಂದ- ನವಲಗುಂದ ರೈತರ ಹೋರಾಟ ದೇಶದ ಇತಿಹಾಸದಲ್ಲೇ ಮಹತ್ವದ ತಿರುವು ಪಡೆದುಕೊಂಡಿತು ಎಂದು ನೆನಪಿಸಿಕೊಂಡರು.</p>.<p>ರೈತರು ತಾವು ಬೆಳೆದ ಬೆಳೆಯನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಿ, ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಆಶಯ ಹೊಂದಿದ್ದರು. ಕೀಟನಾಶಕ ಬಳಕೆಯನ್ನು ವಿರೋಧಿಸಿದ್ದರು. ಸರ್ಕಾರಗಳು ಈಗಲಾದರೂ ನೆಲ ಮೂಲದ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ ಎಂದು ಒತ್ತಾಯಿಸಿದರು.</p>.<p>ತುಮಕೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಸ್.ಮೋಹನ್, ‘ದೇಶದಲ್ಲಿ ದುಡಿಯುವ ವರ್ಗ ಅಧಿಕಾರಕ್ಕೆ ಬರಬೇಕು. ಅನ್ನ ನೀಡುವ ರೈತನಿಗೆ ಸಮಾಜದಲ್ಲಿ ಸೂಕ್ತ ಗೌರವ ಸಿಗಬೇಕು ಎಂಬ ಆಶಯವನ್ನು ನಂಜುಂಡಸ್ವಾಮಿ ಹೊಂದಿದ್ದರು’ ಎಂದರು.</p>.<p>ಶೇಷಾದ್ರಿಪುರಂ ಕಾಲೇಜು ಪ್ರಾಂಶುಪಾಲ ಪ್ರೊ.ಜಿ.ಟಿ.ಜಗದೀಶ, ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅಧ್ಯಯನ ಪೀಠದ ನಿರ್ದೇಶಕ ಎಂ.ಮುನಿರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ‘ಪ್ರತಿಯೊಬ್ಬ ರೈತನೂ ನಾಯಕನಾಗಬೇಕು ಎಂದು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಬಯಸಿದ್ದರು. ಹಸಿರು ಶಾಲನ್ನು ರೈತರ ಕಿರೀಟವಾಗಿ, ಆತ್ಮಗೌರವದ ಸಂಕೇತವಾಗಿ ಪರಿಗಣಿಸಿದ್ದರು’ ಎಂದು ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಅಣ್ಣಪ್ಪ ಮಳಿಮಠ ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾಲಯ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅಧ್ಯಯನ ಪೀಠ, ಶೇಷಾದ್ರಿಪುರಂ ಕಾಲೇಜು ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಪ್ರೊ.ಎಂ.ಡಿ.ನಂಜುಂಡಸ್ವಾಮಿ ವಿಚಾರಧಾರೆ– ಭಾರತದ ರೈತ ಚಳವಳಿ’ ಕುರಿತು ಉಪನ್ಯಾಸ ನೀಡಿದರು.</p>.<p>ನಂಜುಂಡಸ್ವಾಮಿ ಏಕಾಂಗಿಯಾಗಿ ಹೋರಾಟ ಆರಂಭಿಸಿ, ಅದನ್ನು ಬೃಹತ್ ಚಳವಳಿಯನ್ನಾಗಿ ರೂಪಿಸಿ ರೈತ ಸಂಘ ಕಟ್ಟಿ, ಬೆಳೆಸಿದರು. ಜಾತ್ಯತೀತ ತಳಹದಿಯ ಮೇಲೆ ರೈತ ಚಳವಳಿ ಸಂಘಟಿಸಿದ್ದರು. ನರಗುಂದ- ನವಲಗುಂದ ರೈತರ ಹೋರಾಟ ದೇಶದ ಇತಿಹಾಸದಲ್ಲೇ ಮಹತ್ವದ ತಿರುವು ಪಡೆದುಕೊಂಡಿತು ಎಂದು ನೆನಪಿಸಿಕೊಂಡರು.</p>.<p>ರೈತರು ತಾವು ಬೆಳೆದ ಬೆಳೆಯನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಿ, ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಆಶಯ ಹೊಂದಿದ್ದರು. ಕೀಟನಾಶಕ ಬಳಕೆಯನ್ನು ವಿರೋಧಿಸಿದ್ದರು. ಸರ್ಕಾರಗಳು ಈಗಲಾದರೂ ನೆಲ ಮೂಲದ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ ಎಂದು ಒತ್ತಾಯಿಸಿದರು.</p>.<p>ತುಮಕೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಸ್.ಮೋಹನ್, ‘ದೇಶದಲ್ಲಿ ದುಡಿಯುವ ವರ್ಗ ಅಧಿಕಾರಕ್ಕೆ ಬರಬೇಕು. ಅನ್ನ ನೀಡುವ ರೈತನಿಗೆ ಸಮಾಜದಲ್ಲಿ ಸೂಕ್ತ ಗೌರವ ಸಿಗಬೇಕು ಎಂಬ ಆಶಯವನ್ನು ನಂಜುಂಡಸ್ವಾಮಿ ಹೊಂದಿದ್ದರು’ ಎಂದರು.</p>.<p>ಶೇಷಾದ್ರಿಪುರಂ ಕಾಲೇಜು ಪ್ರಾಂಶುಪಾಲ ಪ್ರೊ.ಜಿ.ಟಿ.ಜಗದೀಶ, ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅಧ್ಯಯನ ಪೀಠದ ನಿರ್ದೇಶಕ ಎಂ.ಮುನಿರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>