ಮಧುಗಿರಿ: ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯಿಂದ ಸೆ. 15ರಂದು ಮಧ್ಯಾಹ್ನ 12ಗಂಟೆಯಿಂದ 2 ರವರೆಗೆ ಸಾರ್ವಜನಿಕರ ಕುಂದುಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ. ಜನರು ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ. ಇಒ ಡಿ. ದೊಡ್ಡಸಿದ್ದಯ್ಯ ತಿಳಿಸಿದ್ದಾರೆ.
ತಾಲ್ಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಪುರಸಭೆ , ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.