<p><strong>ಪಾವಗಡ: </strong>ಕೋವಿಡ್–19 ನಿಯಂತ್ರಿಸಲು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.</p>.<p>ಪಟ್ಟಣದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ರಾಮಕೃಷ್ಣ ಸೇವಾಶ್ರಮ ಮತ್ತು ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಆಯೋಜಿಸಿದ್ದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸೋಂಕು ತಗುಲಿ ಸಾಕಷ್ಟು ಕುಟುಂಬಗಳು ಕಷ್ಟ ಅನುಭವಿಸುತ್ತಿವೆ. ಸೋಂಕಿನಿಂದ ಮೃತಪಟ್ಟ ಎಷ್ಟೋ ಕುಟುಂಬಗಳ ಸದಸ್ಯರು ಅನಾಥರಾಗಿದ್ದಾರೆ. ಜನತೆ ಲಸಿಕೆ ಹಾಕಿಸಿಕೊಂಡು ಸೋಂಕು ಹರಡುವುದನ್ನು ತಡೆಯಲು ಸಹಕರಿಸಬೇಕು. ಇತರರಿಗೂ ಲಸಿಕೆ ಹಾಕಿಸುವಂತೆ ತಿಳಿಸಬೇಕು ಎಂದರು.</p>.<p>ಸ್ವಾಮಿ ಜಪಾನಂದ ಜಿ ಮಾತನಾಡಿ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪಾವಗಡ, ಮಧುಗಿರಿ, ಕೊರಟಗೆರೆ, ಶಿರಾ ತಾಲ್ಲೂಕುಗಳ 2,605 ಮಂದಿ ಅಕ್ಷರದಾಸೋಹ ಅಡುಗೆ ಸಿಬ್ಬಂದಿಗೆ ₹40 ಲಕ್ಷ ವೆಚ್ಚದಲ್ಲಿ ಪಡಿತರ ಕಿಟ್ ವಿತರಿಸಲಾಗುವುದು. ರಾಮಕೃಷ್ಣ ಸೇವಾಶ್ರಮ, ಇನ್ಫೊಸಿಸ್ ಸಹಯೋಗದಲ್ಲಿ ಈಗಾಗಲೇ ಜಿಲ್ಲೆಯ ಸಾವಿರಾರು ಮಂದಿಗೆ ಪಡಿತರ ವಿತರಿಸಲಾಗಿದೆ ಎಂದರು.</p>.<p>ಜಿಲ್ಲೆಯ 50 ಸಾವಿರ ಮಕ್ಕಳಿಗೆ ಹಾಲಿನ ಜೊತೆ ಪೌಷ್ಟಿಕ ಆಹಾರ ವಿತರಿಸಲು 2019ರಲ್ಲಿ ಚಾಲನೆ ನೀಡಲಾಗಿತ್ತು. ಕೋವಿಡ್ ಸಮಸ್ಯೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮುಂದಿನ ದಿನಗಳಲ್ಲಿ ಯೋಜನೆಗೆ ಮತ್ತೆ ಚಾಲನೆ ಸಿಗಲಿದೆ ಎಂದರು.</p>.<p>ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಪ್ರಬಂಧಕ ಕಿರಣ್, ಪುರಸಭೆ ಸದಸ್ಯ ಸುದೇಶ್ ಬಾಬು, ವಿಷಯ ಪರಿವೀಕ್ಷಕ ಚಿತ್ತಯ್ಯ ಮಾತನಾಡಿದರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಪದಾಧಿಕಾರಿಗಳಾದ ರಾಜೀವ್, ರಾಜೇಶ್, ದೈಹಿಕ ಶಿಕ್ಷಣ ಅಧಿಕಾರಿ ಬಸವರಾಜು, ದೇವರಾಜರಾವ್ ಲೋಕೇಶ್, ಭರತ್, ನಮ್ಮ ಹಕ್ಕು ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ಕೋವಿಡ್–19 ನಿಯಂತ್ರಿಸಲು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.</p>.<p>ಪಟ್ಟಣದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ರಾಮಕೃಷ್ಣ ಸೇವಾಶ್ರಮ ಮತ್ತು ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಆಯೋಜಿಸಿದ್ದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸೋಂಕು ತಗುಲಿ ಸಾಕಷ್ಟು ಕುಟುಂಬಗಳು ಕಷ್ಟ ಅನುಭವಿಸುತ್ತಿವೆ. ಸೋಂಕಿನಿಂದ ಮೃತಪಟ್ಟ ಎಷ್ಟೋ ಕುಟುಂಬಗಳ ಸದಸ್ಯರು ಅನಾಥರಾಗಿದ್ದಾರೆ. ಜನತೆ ಲಸಿಕೆ ಹಾಕಿಸಿಕೊಂಡು ಸೋಂಕು ಹರಡುವುದನ್ನು ತಡೆಯಲು ಸಹಕರಿಸಬೇಕು. ಇತರರಿಗೂ ಲಸಿಕೆ ಹಾಕಿಸುವಂತೆ ತಿಳಿಸಬೇಕು ಎಂದರು.</p>.<p>ಸ್ವಾಮಿ ಜಪಾನಂದ ಜಿ ಮಾತನಾಡಿ, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪಾವಗಡ, ಮಧುಗಿರಿ, ಕೊರಟಗೆರೆ, ಶಿರಾ ತಾಲ್ಲೂಕುಗಳ 2,605 ಮಂದಿ ಅಕ್ಷರದಾಸೋಹ ಅಡುಗೆ ಸಿಬ್ಬಂದಿಗೆ ₹40 ಲಕ್ಷ ವೆಚ್ಚದಲ್ಲಿ ಪಡಿತರ ಕಿಟ್ ವಿತರಿಸಲಾಗುವುದು. ರಾಮಕೃಷ್ಣ ಸೇವಾಶ್ರಮ, ಇನ್ಫೊಸಿಸ್ ಸಹಯೋಗದಲ್ಲಿ ಈಗಾಗಲೇ ಜಿಲ್ಲೆಯ ಸಾವಿರಾರು ಮಂದಿಗೆ ಪಡಿತರ ವಿತರಿಸಲಾಗಿದೆ ಎಂದರು.</p>.<p>ಜಿಲ್ಲೆಯ 50 ಸಾವಿರ ಮಕ್ಕಳಿಗೆ ಹಾಲಿನ ಜೊತೆ ಪೌಷ್ಟಿಕ ಆಹಾರ ವಿತರಿಸಲು 2019ರಲ್ಲಿ ಚಾಲನೆ ನೀಡಲಾಗಿತ್ತು. ಕೋವಿಡ್ ಸಮಸ್ಯೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮುಂದಿನ ದಿನಗಳಲ್ಲಿ ಯೋಜನೆಗೆ ಮತ್ತೆ ಚಾಲನೆ ಸಿಗಲಿದೆ ಎಂದರು.</p>.<p>ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಪ್ರಬಂಧಕ ಕಿರಣ್, ಪುರಸಭೆ ಸದಸ್ಯ ಸುದೇಶ್ ಬಾಬು, ವಿಷಯ ಪರಿವೀಕ್ಷಕ ಚಿತ್ತಯ್ಯ ಮಾತನಾಡಿದರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಪದಾಧಿಕಾರಿಗಳಾದ ರಾಜೀವ್, ರಾಜೇಶ್, ದೈಹಿಕ ಶಿಕ್ಷಣ ಅಧಿಕಾರಿ ಬಸವರಾಜು, ದೇವರಾಜರಾವ್ ಲೋಕೇಶ್, ಭರತ್, ನಮ್ಮ ಹಕ್ಕು ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>