<p><strong>ತುಮಕೂರು:</strong> ಕೇಂದ್ರ ಸರ್ಕಾರ ಸಹಕಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್ ಹಾಗೂ ಜಿಎಸ್ಟಿ ವಿಧಿಸಿರುವುದನ್ನು ಖಂಡಿಸಿ ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಅಸೋಸಿಯೇಷನ್ನಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಈ ವೇಳೆ ಮಾತನಾಡಿದ ರಾಜ್ಯ ಸಂಚಾಲಕ ಕೆ.ಎನ್.ಮಂಜುನಾಥ್, ದೇಶದ ಕೃಷಿಕರು, ದೇಶದ ಆರ್ಥಿಕ ವ್ಯವಸ್ಥೆಗೆ ಅತ್ಯಮೂಲ್ಯ ಕೊಡುಗೆ ನೀಡಿರುವ ಸಹಕಾರಿ ಕ್ಷೇತ್ರದ ಮೇಲೆ ಕೇಂದ್ರ ಸರ್ಕಾರ ಕ್ರಮ ಆಕ್ರಮಣಕಾರಿ ಆಗಿದೆ ಎಂದರು.</p>.<p>ಸಹಕಾರ ಕ್ಷೇತ್ರದ ಮೇಲೆ ನಿಯಂತ್ರಣ ಹಾಕುವ ಮೂಲಕ ಕ್ಷೇತ್ರದ ಬೆಳವಣಿಗೆ ಕುಂಠಿತವಾಗುತ್ತಿದೆ. ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದ ಮೇಲೆ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು. ಕೇಂದ್ರ ಸರ್ಕಾರದ ಈ ನೀತಿಯಿಂದ ರಾಷ್ಟ್ರದಲ್ಲಿರುವ 52 ಸಾವಿರ ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ತೊಂದರೆ ಆಗಲಿದೆ ಎಂದು ದೂರಿದರು.</p>.<p>ಸಾಮಾನ್ಯ ಜನರಲ್ಲಿಯೂ ಉಳಿತಾಯ ಮನೋಭಾವನೆ ಪ್ರೇರೇಪಿಸುವುದಕ್ಕಾಗಿ ಹುಟ್ಟಿಕೊಂಡ ಸಹಕಾರಿ ಕ್ಷೇತ್ರದ ಮೇಲೆ ಕೇಂದ್ರ ಸರ್ಕಾರ ಒಂದರ ಮೇಲೊಂದು ಪ್ರಹಾರ ಮಾಡುತ್ತಿದೆ. ಆದಾಯ ತೆರಿಗೆ, ಟಿಡಿಎಸ್, ಜಿಎಸ್ಟಿ ಮೂಲಕ ಸಹಕಾರಿ ಬೆಳವಣಿಗೆಗೆ ಮಾರಕವಾಗುವಂತಹ ಕಾನೂನು ಜಾರಿಗೆ ತಂದಿದೆ ಎಂದರು.</p>.<p>ಸಹಕಾರಿ ಕೇತ್ರದ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್, ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಹಿಂಪಡೆಯುವ ಮೂಲಕ ಸಹಕಾರಿ ಕ್ಷೇತ್ರಗಳ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.</p>.<p>ವಿವಿಧ ಸಹಕಾರಿ ಸಂಸ್ಥೆಗಳ ಅರುಣ್ಕುಮಾರ್, ಶ್ರೀದೇವಿ, ಮಂಜುನಾಥ್, ಜಯಶ್ರೀ, ವಾಸವಿಗುಪ್ತ, ನರಸಿಂಹಯ್ಯ, ಡಾ.ಮುದ್ದುಕೃಷ್ಣ, ರಾಮಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೇಂದ್ರ ಸರ್ಕಾರ ಸಹಕಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ, ಟಿಡಿಎಸ್ ಹಾಗೂ ಜಿಎಸ್ಟಿ ವಿಧಿಸಿರುವುದನ್ನು ಖಂಡಿಸಿ ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಅಸೋಸಿಯೇಷನ್ನಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಈ ವೇಳೆ ಮಾತನಾಡಿದ ರಾಜ್ಯ ಸಂಚಾಲಕ ಕೆ.ಎನ್.ಮಂಜುನಾಥ್, ದೇಶದ ಕೃಷಿಕರು, ದೇಶದ ಆರ್ಥಿಕ ವ್ಯವಸ್ಥೆಗೆ ಅತ್ಯಮೂಲ್ಯ ಕೊಡುಗೆ ನೀಡಿರುವ ಸಹಕಾರಿ ಕ್ಷೇತ್ರದ ಮೇಲೆ ಕೇಂದ್ರ ಸರ್ಕಾರ ಕ್ರಮ ಆಕ್ರಮಣಕಾರಿ ಆಗಿದೆ ಎಂದರು.</p>.<p>ಸಹಕಾರ ಕ್ಷೇತ್ರದ ಮೇಲೆ ನಿಯಂತ್ರಣ ಹಾಕುವ ಮೂಲಕ ಕ್ಷೇತ್ರದ ಬೆಳವಣಿಗೆ ಕುಂಠಿತವಾಗುತ್ತಿದೆ. ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದ ಮೇಲೆ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು. ಕೇಂದ್ರ ಸರ್ಕಾರದ ಈ ನೀತಿಯಿಂದ ರಾಷ್ಟ್ರದಲ್ಲಿರುವ 52 ಸಾವಿರ ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ತೊಂದರೆ ಆಗಲಿದೆ ಎಂದು ದೂರಿದರು.</p>.<p>ಸಾಮಾನ್ಯ ಜನರಲ್ಲಿಯೂ ಉಳಿತಾಯ ಮನೋಭಾವನೆ ಪ್ರೇರೇಪಿಸುವುದಕ್ಕಾಗಿ ಹುಟ್ಟಿಕೊಂಡ ಸಹಕಾರಿ ಕ್ಷೇತ್ರದ ಮೇಲೆ ಕೇಂದ್ರ ಸರ್ಕಾರ ಒಂದರ ಮೇಲೊಂದು ಪ್ರಹಾರ ಮಾಡುತ್ತಿದೆ. ಆದಾಯ ತೆರಿಗೆ, ಟಿಡಿಎಸ್, ಜಿಎಸ್ಟಿ ಮೂಲಕ ಸಹಕಾರಿ ಬೆಳವಣಿಗೆಗೆ ಮಾರಕವಾಗುವಂತಹ ಕಾನೂನು ಜಾರಿಗೆ ತಂದಿದೆ ಎಂದರು.</p>.<p>ಸಹಕಾರಿ ಕೇತ್ರದ ಮೇಲೆ ವಿಧಿಸಿರುವ ಆದಾಯ ತೆರಿಗೆ, ಟಿಡಿಎಸ್, ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಹಿಂಪಡೆಯುವ ಮೂಲಕ ಸಹಕಾರಿ ಕ್ಷೇತ್ರಗಳ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.</p>.<p>ವಿವಿಧ ಸಹಕಾರಿ ಸಂಸ್ಥೆಗಳ ಅರುಣ್ಕುಮಾರ್, ಶ್ರೀದೇವಿ, ಮಂಜುನಾಥ್, ಜಯಶ್ರೀ, ವಾಸವಿಗುಪ್ತ, ನರಸಿಂಹಯ್ಯ, ಡಾ.ಮುದ್ದುಕೃಷ್ಣ, ರಾಮಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>