ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಳು ಬಾವಿಗೆ ಬಿದ್ದ ಚಿರತೆ

Last Updated 22 ಡಿಸೆಂಬರ್ 2019, 14:02 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಮಂಚಿಹಳ್ಳಿ ಗ್ರಾಮದ ತಿಮ್ಮಣ್ಣ ಮತ್ತು ಸುರೇಶ್ ಅವರ ಅಡಿಕೆ ತೋಟದಲ್ಲಿರುವ ನೀರಿಲ್ಲದ ಬಾವಿಗೆ 3 ವರ್ಷದ ಹೆಣ್ಣು ಚಿರತೆ ಬಿದ್ದಿದೆ.

ಶನಿವಾರ ಮಧ್ಯಾಹ್ನ 1.30 ರ ವೇಳೆಯಲ್ಲಿ ತೋಟದ ಮಾಲೀಕರು ಬಾವಿಯಲ್ಲಿದ್ದ ಚಿರತೆ ಕಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅರವಳಿಕೆ ತಜ್ಞರ ತಂಡದ ಸಹಾಯದಿಂದ ಸಂಜೆ 5.30 ರ ವೇಳೆಗೆ ಚಿರತೆಯನ್ನು ಹೊರತೆಗೆಯಲಾಯಿತು.

ಸ್ಥಳದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಸಿ.ರವಿ, ನಟರಾಜ್, ಮಂಜುನಾಥ್, ಅರವಳಿಕೆ ತಜ್ಞ ಡಾ.ಮುರಳಿ ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT