<p><strong>ಗುಬ್ಬಿ: </strong>ಇತಿಹಾಸ ಪ್ರಸಿದ್ಧ ಗುಬ್ಬಿಯ ಗೋಸಲ ಚನ್ನಬಸವೇಶ್ವರ ಸ್ವಾಮಿ ರಥೋತ್ಸವವು ವೈಭವಯುತವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಂಗಳವಾರ ಮಧ್ಯಾಹ್ನ ನೆರವೇರಿತು.</p>.<p>ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ತೊರೆ ಮಠದ ರಾಜಶೇಖರ ಸ್ವಾಮೀಜಿ, ತೇವಡಿಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿ ಹಾಗೂ ದೊಡ್ಡಗುಣಿ ರೇವಣ್ಣ ಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಿದ್ದರು.</p>.<p>ಸುಡುಬಿಸಿಲಿನ ನಡುವೆಯೂ ಕೊರೊನಾವನ್ನು ಲೆಕ್ಕಿಸದೆಅಪಾರ ಭಕ್ತರು ಭಾಗವಹಿಸಿದ್ದರು.</p>.<p>ಭಕ್ತರು ಬಾಳೆಹಣ್ಣು ದವನವನ್ನು ಸ್ವಾಮಿಯವರ ತೇರಿಗೆ ಎಸೆಯುವುದರ ಮೂಲಕ ತಮ್ಮ ಹರಕೆ ತೀರಿಸಿದರು. ‘ಕೊರೊನಾ ತೊಲಗಲಿ, ಗುಬ್ಬಿಯಪ್ಪನ ಕೃಪೆ ಭಕ್ತರ ಮೇಲಿರಲಿ’ ಎಂದು ಭಕ್ತರು ಜೈಕಾರ ಹಾಕಿದರು.</p>.<p>ಬಿಗಿ ಪೊಲೀಸ್ ಬಂದೋಬಸ್ತ್ ಇದ್ದರೂ, ಜನ ಜಂಗುಳಿಯ ನಡುವೆ ಕಳ್ಳರು ತಮ್ಮ ಕೈಚಳಕ ತೋರಿದ ಘಟನೆಗಳು ನಡೆದವು.</p>.<p>ಕೊರೊನಾ ನಿಯಮ ಅನುಸಾರ ಈ ಬಾರಿ ಪಾನಕ, ಫಲಹಾರಗಳ ವಿತರಣೆ ನಿಷೇಧಿಸಲಾಗಿತ್ತು. ಕೆಲವೆಡೆ ಮಾತ್ರ ಮಜ್ಜಿಗೆ ವಿತರಿಸಲಾಯಿತು. ರಥೋತ್ಸವದ ನಂತರ ಭಕ್ತ ಸಮೂಹಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ: </strong>ಇತಿಹಾಸ ಪ್ರಸಿದ್ಧ ಗುಬ್ಬಿಯ ಗೋಸಲ ಚನ್ನಬಸವೇಶ್ವರ ಸ್ವಾಮಿ ರಥೋತ್ಸವವು ವೈಭವಯುತವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಂಗಳವಾರ ಮಧ್ಯಾಹ್ನ ನೆರವೇರಿತು.</p>.<p>ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ತೊರೆ ಮಠದ ರಾಜಶೇಖರ ಸ್ವಾಮೀಜಿ, ತೇವಡಿಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿ ಹಾಗೂ ದೊಡ್ಡಗುಣಿ ರೇವಣ್ಣ ಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಿದ್ದರು.</p>.<p>ಸುಡುಬಿಸಿಲಿನ ನಡುವೆಯೂ ಕೊರೊನಾವನ್ನು ಲೆಕ್ಕಿಸದೆಅಪಾರ ಭಕ್ತರು ಭಾಗವಹಿಸಿದ್ದರು.</p>.<p>ಭಕ್ತರು ಬಾಳೆಹಣ್ಣು ದವನವನ್ನು ಸ್ವಾಮಿಯವರ ತೇರಿಗೆ ಎಸೆಯುವುದರ ಮೂಲಕ ತಮ್ಮ ಹರಕೆ ತೀರಿಸಿದರು. ‘ಕೊರೊನಾ ತೊಲಗಲಿ, ಗುಬ್ಬಿಯಪ್ಪನ ಕೃಪೆ ಭಕ್ತರ ಮೇಲಿರಲಿ’ ಎಂದು ಭಕ್ತರು ಜೈಕಾರ ಹಾಕಿದರು.</p>.<p>ಬಿಗಿ ಪೊಲೀಸ್ ಬಂದೋಬಸ್ತ್ ಇದ್ದರೂ, ಜನ ಜಂಗುಳಿಯ ನಡುವೆ ಕಳ್ಳರು ತಮ್ಮ ಕೈಚಳಕ ತೋರಿದ ಘಟನೆಗಳು ನಡೆದವು.</p>.<p>ಕೊರೊನಾ ನಿಯಮ ಅನುಸಾರ ಈ ಬಾರಿ ಪಾನಕ, ಫಲಹಾರಗಳ ವಿತರಣೆ ನಿಷೇಧಿಸಲಾಗಿತ್ತು. ಕೆಲವೆಡೆ ಮಾತ್ರ ಮಜ್ಜಿಗೆ ವಿತರಿಸಲಾಯಿತು. ರಥೋತ್ಸವದ ನಂತರ ಭಕ್ತ ಸಮೂಹಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>