<p><strong>ಗುಬ್ಬಿ:</strong> ‘ಕೆಲಸ ಆಗಬೇಕಾದಾಗ ಕಾಲು ಹಿಡಿದು ಕೆಲಸವಾದ ನಂತರ ಕಾಲು ಎಳೆಯುವ ಬುದ್ಧಿ ಇರುವ ರಾಜಕಾರಣಿಗಳಿಂದ ಯಾವುದೇ ಪಾಠ ಕಲಿಯುವ ಅಗತ್ಯವಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಕಿಡಿಕಾರಿದರು.</p>.<p>ಅವರು ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಏರ್ಪಡಿಸಿದ್ದ ಕೆಎನ್ಆರ್ ಜನ್ಮ ದಿನಾಚರಣೆ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಹಿಂದುಳಿದ ವರ್ಗಗಳ ಮತಗಳಿಂದ ಆಯ್ಕೆಯಾಗಿದ್ದೇನೆ ಎಂದು ಹೇಳುವ ಗುಬ್ಬಿ ಶಾಸಕ ಧೈರ್ಯವಿದ್ದರೆ ಕೆ.ಎನ್ ರಾಜಣ್ಣ ಅವರ ಕುಟುಂಬದಿಂದ ಯಾವುದೇ ಸಹಾಯ ಪಡೆದಿಲ್ಲ ಎಂದು ಹೇಳಲಿ ನೋಡೋಣ’ ಎಂದು ಸವಾಲು ಹಾಕಿದರು.</p>.<p>‘ಅಧಿಕಾರಕ್ಕಾಗಿ ಯಾರ ಬಳಿಗೂ ನಾವು ಹೋಗಿಲ್ಲ. ಬೇರೆಯವರ ಮನೆ ಬಾಗಿಲಿಗೆ ಹೋಗುವಂತಹ ಪರಿಸ್ಥಿತಿ ಬಂದಿಲ್ಲ. ಆದರೆ ಸಹಾಯ ಪಡೆದವರು ನಿಂದಿಸಿ ಮಾತನಾಡುವುದು ಮನಸ್ಸಿಗೆ ನೋವನ್ನುಂಟು ಮಾಡಿದೆ’ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ವಿರುದ್ಧ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.</p>.<p>‘ನಮ್ಮಿಂದ ಸಹಾಯ ಪಡೆದವರು ಅದಕ್ಕೆ ಪ್ರತಿಯಾಗಿ ಸಹಾಯ ಮಾಡಿದ್ದಾರೆ. ಅದರಲ್ಲಿ ವಿಶೇಷ ಏನೂ ಇಲ್ಲ. ತುಮಕೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲ್ಲೂಕಿನ ವಾಲ್ಮೀಕಿ ಸಮುದಾಯದವರು ಭಾಗವಹಿಸದಂತೆ ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಇದರ ಹಿಂದೆ ಯಾರ ಕೈವಾಡ ಇದೆ ಎಂಬುದು ತಿಳಿದಿದೆ.<br /> ಸಮುದಾಯ ಅದಾವುದಕ್ಕೂ ಕಿವಿಗೊಡದೆ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು’ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ಸಮುದಾಯದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ‘ಕೆಲಸ ಆಗಬೇಕಾದಾಗ ಕಾಲು ಹಿಡಿದು ಕೆಲಸವಾದ ನಂತರ ಕಾಲು ಎಳೆಯುವ ಬುದ್ಧಿ ಇರುವ ರಾಜಕಾರಣಿಗಳಿಂದ ಯಾವುದೇ ಪಾಠ ಕಲಿಯುವ ಅಗತ್ಯವಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಕಿಡಿಕಾರಿದರು.</p>.<p>ಅವರು ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಏರ್ಪಡಿಸಿದ್ದ ಕೆಎನ್ಆರ್ ಜನ್ಮ ದಿನಾಚರಣೆ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಹಿಂದುಳಿದ ವರ್ಗಗಳ ಮತಗಳಿಂದ ಆಯ್ಕೆಯಾಗಿದ್ದೇನೆ ಎಂದು ಹೇಳುವ ಗುಬ್ಬಿ ಶಾಸಕ ಧೈರ್ಯವಿದ್ದರೆ ಕೆ.ಎನ್ ರಾಜಣ್ಣ ಅವರ ಕುಟುಂಬದಿಂದ ಯಾವುದೇ ಸಹಾಯ ಪಡೆದಿಲ್ಲ ಎಂದು ಹೇಳಲಿ ನೋಡೋಣ’ ಎಂದು ಸವಾಲು ಹಾಕಿದರು.</p>.<p>‘ಅಧಿಕಾರಕ್ಕಾಗಿ ಯಾರ ಬಳಿಗೂ ನಾವು ಹೋಗಿಲ್ಲ. ಬೇರೆಯವರ ಮನೆ ಬಾಗಿಲಿಗೆ ಹೋಗುವಂತಹ ಪರಿಸ್ಥಿತಿ ಬಂದಿಲ್ಲ. ಆದರೆ ಸಹಾಯ ಪಡೆದವರು ನಿಂದಿಸಿ ಮಾತನಾಡುವುದು ಮನಸ್ಸಿಗೆ ನೋವನ್ನುಂಟು ಮಾಡಿದೆ’ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ವಿರುದ್ಧ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.</p>.<p>‘ನಮ್ಮಿಂದ ಸಹಾಯ ಪಡೆದವರು ಅದಕ್ಕೆ ಪ್ರತಿಯಾಗಿ ಸಹಾಯ ಮಾಡಿದ್ದಾರೆ. ಅದರಲ್ಲಿ ವಿಶೇಷ ಏನೂ ಇಲ್ಲ. ತುಮಕೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲ್ಲೂಕಿನ ವಾಲ್ಮೀಕಿ ಸಮುದಾಯದವರು ಭಾಗವಹಿಸದಂತೆ ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಇದರ ಹಿಂದೆ ಯಾರ ಕೈವಾಡ ಇದೆ ಎಂಬುದು ತಿಳಿದಿದೆ.<br /> ಸಮುದಾಯ ಅದಾವುದಕ್ಕೂ ಕಿವಿಗೊಡದೆ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು’ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ಸಮುದಾಯದ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>