<p><strong>ಗುಬ್ಬಿ</strong>: ಗುಬ್ಬಿಯ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ಗುರುವಾರ ರಥೋತ್ಸವ ಅದ್ದೂರಿಯಾಗಿ ನಡೆಯಿತು.</p>.<p>ರಥೋತ್ಸವ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಮೂರ್ತಿಗೆ ಗಂಗಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ, ಎಳನೀರು, ಗಂಧದ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ತುಂಬೆ ಹೂವಿನ ಅರ್ಚನೆ ಮಾಡಿ, ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>18 ಕೋಮಿನ ಮುಖಂಡರು, ಮುಜರಾಯಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮಂಗಳಾರತಿ ನಡೆಯಿತು. ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಲಿಂಗದವೀರರು ಹಾಗೂ ನಂದಿದ್ವಜ ಕುಣಿತಗಳೊಂದಿಗೆ ತಂದು ಪುಷ್ಪಾಲಂಕೃತ ರಥದಲ್ಲಿ ಕೂರಿಸಲಾಯಿತು. ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಬಿಸಿಲಿನ ನಡುವೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ರಥ ಸಾಗಿದಂತೆ ಭಕ್ತರು ಜಯಘೋಷ ಕೂಗಿದರು. ದವನ ಚುಚ್ಚಿದ ಬಾಳೆಹಣ್ಣುಗಳನ್ನು ಕಳಸಕ್ಕೆ ಎಸೆದು ಹರಕೆ ತೀರಿಸಿದರು. ರಥೋತ್ಸವದ ನಂತರ ಭಕ್ತರು ದೇವರ ಮೂರ್ತಿಗೆ ಹಣ್ಣುಕಾಯಿ, ಪೂಜೆ ಸಲ್ಲಿಸಿದರು. ಭಕ್ತರಿಗೆ ಪಾನಕ, ಫಲಹಾರ, ಕೋಸಂಬರಿ, ಮಜ್ಜಿಗೆ ವಿತರಿಸಿದರು. ಅನ್ನದಾಸೋಹ ನಡೆಯಿತು.</p>.<p>18 ಕೋಮಿನ ಮುಖಂಡರು, ತಾಲ್ಲೂಕು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡಿದ್ದರು.</p>.<p>ರಾತ್ರಿ ಸ್ಥಳೀಯ ಕಲಾವಿದರಿಂದ ‘ಸಂಪೂರ್ಣ ರಾಮಾಯಣ’ ಪೌರಾಣಿಕ ನಾಟಕ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಗುಬ್ಬಿಯ ಗೋಸಲ ಚನ್ನಬಸವೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ಗುರುವಾರ ರಥೋತ್ಸವ ಅದ್ದೂರಿಯಾಗಿ ನಡೆಯಿತು.</p>.<p>ರಥೋತ್ಸವ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ಮೂರ್ತಿಗೆ ಗಂಗಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ, ಎಳನೀರು, ಗಂಧದ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ತುಂಬೆ ಹೂವಿನ ಅರ್ಚನೆ ಮಾಡಿ, ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.</p>.<p>18 ಕೋಮಿನ ಮುಖಂಡರು, ಮುಜರಾಯಿ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮಂಗಳಾರತಿ ನಡೆಯಿತು. ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಲಿಂಗದವೀರರು ಹಾಗೂ ನಂದಿದ್ವಜ ಕುಣಿತಗಳೊಂದಿಗೆ ತಂದು ಪುಷ್ಪಾಲಂಕೃತ ರಥದಲ್ಲಿ ಕೂರಿಸಲಾಯಿತು. ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಬಿಸಿಲಿನ ನಡುವೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ರಥ ಸಾಗಿದಂತೆ ಭಕ್ತರು ಜಯಘೋಷ ಕೂಗಿದರು. ದವನ ಚುಚ್ಚಿದ ಬಾಳೆಹಣ್ಣುಗಳನ್ನು ಕಳಸಕ್ಕೆ ಎಸೆದು ಹರಕೆ ತೀರಿಸಿದರು. ರಥೋತ್ಸವದ ನಂತರ ಭಕ್ತರು ದೇವರ ಮೂರ್ತಿಗೆ ಹಣ್ಣುಕಾಯಿ, ಪೂಜೆ ಸಲ್ಲಿಸಿದರು. ಭಕ್ತರಿಗೆ ಪಾನಕ, ಫಲಹಾರ, ಕೋಸಂಬರಿ, ಮಜ್ಜಿಗೆ ವಿತರಿಸಿದರು. ಅನ್ನದಾಸೋಹ ನಡೆಯಿತು.</p>.<p>18 ಕೋಮಿನ ಮುಖಂಡರು, ತಾಲ್ಲೂಕು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡಿದ್ದರು.</p>.<p>ರಾತ್ರಿ ಸ್ಥಳೀಯ ಕಲಾವಿದರಿಂದ ‘ಸಂಪೂರ್ಣ ರಾಮಾಯಣ’ ಪೌರಾಣಿಕ ನಾಟಕ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>