ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಎರಡು ಸಾವಿರ ಪೊಲೀಸರನ್ನು ಭದ್ರೆತೆಗಾಗಿ ನಿಯೋಜಿಸಲಾಗಿದೆ. ಎರಡು ದಿನಗಳಿಂದ ಬಿದರೆಹಳ್ಳ ಕಾವಲ್ ಬಳಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಅವರಿಗೆ ಶನಿವಾರ ರಾತ್ರಿಯಿಂದ ಸರಿಯಾದ ಊಟದ ವ್ಯವಸ್ಥೆ ಮಾಡಿಲ್ಲ. ‘ಆಯೋಜಕರು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಿಲ್ಲ. ಹಗಲೆಲ್ಲಾ ಬಿಸಿಲಿನಲ್ಲಿ ನಿಲ್ಲಬೇಕಾಗಿದೆ, ನೆರಳಿನ ವ್ಯವಸ್ಥೆಯೂ ಮಾಡಿಲ್ಲ. ಹತ್ತಿರದಲ್ಲಿ ಯಾವುದೇ ಹೋಟೆಲ್, ಅಂಗಡಿಗಳು ಇಲ್ಲ. ಮೂಲಸೌಲಭ್ಯ ಕಲ್ಪಿಸುವಲ್ಲಿ ಆಯೋಜಕರು ವಿಫಲವಾಗಿದ್ದಾರೆ’ ಎಂದು ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.