<p><strong>ಗುಬ್ಬಿ</strong>: ತಾಲ್ಲೂಕಿನ ಕೆಂಚನಹಳ್ಳಿ, ದೊಣ್ಣೆರೆ, ಬಾಡೇನಹಳ್ಳಿ ರೈಲ್ವೆ ಕೆಳ ಸೇತುವೆಗಳನ್ನು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ, ಇಂಧನ ಖಾತೆಗಳ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಬುಧವಾರ ಲೋಕಾರ್ಪಣೆ ಮಾಡಿದರು. </p>.<p>ಈ ವೇಳೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಎಲ್ಲ ರೈಲ್ವೆ ಕಾಮಗಾರಿಗಳನ್ನು ತುರ್ತಾಗಿ ಮುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು. </p>.<p>ತುಮಕೂರು–ರಾಯದುರ್ಗ ರೈಲ್ವೆ ಕಾಮಗಾರಿಯನ್ನು 2027ರ ವೇಳೆಗೆ ಪೂರ್ಣ ಗೊಳಿಸಲಾಗುವುದು. ತುಮಕೂರು ಲೋಕಸಭಾ ಕ್ಷೇತ್ರದ ಜನರ ಋಣ ತೀರಿಸಲು ಪಕ್ಷಾತೀತವಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ. ಅಧಿಕಾರಕ್ಕಿಂತ ಜನರ ಹಿತ ಮುಖ್ಯ ಎಂದರು.</p>.<p>ಈ ವೇಳೆ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮಯ್ಯ, ನವ್ಯಬಾಬು, ಚಂದ್ರಶೇಖರ್ ಬಾಬು, ಬಿ.ಎಸ್. ನಾಗರಾಜು, ಸಾಗರನಳ್ಳಿ ವಿಜಯಕುಮಾರ್, ಅ.ನ ಲಿಂಗಪ್ಪ, ಪಂಚಾಕ್ಷರಿ, ಬ್ಯಾಟರಂಗೇಗೌಡ, ನಂಜೇಗೌಡ, ರಾಜಶೇಖರ್, ರುದ್ರೇಶ್, ಶಿವಕುಮಾರ್, ರೈಲ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನ ಕೆಂಚನಹಳ್ಳಿ, ದೊಣ್ಣೆರೆ, ಬಾಡೇನಹಳ್ಳಿ ರೈಲ್ವೆ ಕೆಳ ಸೇತುವೆಗಳನ್ನು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ, ಇಂಧನ ಖಾತೆಗಳ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಬುಧವಾರ ಲೋಕಾರ್ಪಣೆ ಮಾಡಿದರು. </p>.<p>ಈ ವೇಳೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಎಲ್ಲ ರೈಲ್ವೆ ಕಾಮಗಾರಿಗಳನ್ನು ತುರ್ತಾಗಿ ಮುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು. </p>.<p>ತುಮಕೂರು–ರಾಯದುರ್ಗ ರೈಲ್ವೆ ಕಾಮಗಾರಿಯನ್ನು 2027ರ ವೇಳೆಗೆ ಪೂರ್ಣ ಗೊಳಿಸಲಾಗುವುದು. ತುಮಕೂರು ಲೋಕಸಭಾ ಕ್ಷೇತ್ರದ ಜನರ ಋಣ ತೀರಿಸಲು ಪಕ್ಷಾತೀತವಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ. ಅಧಿಕಾರಕ್ಕಿಂತ ಜನರ ಹಿತ ಮುಖ್ಯ ಎಂದರು.</p>.<p>ಈ ವೇಳೆ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮಯ್ಯ, ನವ್ಯಬಾಬು, ಚಂದ್ರಶೇಖರ್ ಬಾಬು, ಬಿ.ಎಸ್. ನಾಗರಾಜು, ಸಾಗರನಳ್ಳಿ ವಿಜಯಕುಮಾರ್, ಅ.ನ ಲಿಂಗಪ್ಪ, ಪಂಚಾಕ್ಷರಿ, ಬ್ಯಾಟರಂಗೇಗೌಡ, ನಂಜೇಗೌಡ, ರಾಜಶೇಖರ್, ರುದ್ರೇಶ್, ಶಿವಕುಮಾರ್, ರೈಲ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>